
ಮುಂಬೈ(ಅ.26): ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ, ಉಭಯ ಪಕ್ಷಗಳ ನಡುವಿನ ಅಪನಂಬಿಕೆ ಮುಂದುವರೆದಿದೆ. ಸರ್ಕಾರ ರಚನೆ ಸಂಬಂಧ ನಡೆದ ಮಾತುಕತೆ ವೇಳೆ 50-50 ಸೂತ್ರದ ಕುರಿತು ಲಿಖಿತ ಭರವಸೆ ನೀಡುವಂತೆ ಬಿಜೆಪಿಯನ್ನು ಶಿವಸೇನೆ ಆಗ್ರಹಿಸಿದೆ.
ಶಿವಸೇನೆ'ಮಹಾ'ಬೇಡಿಕೆ: ಸಾಧ್ಯನಾ ಆದಿತ್ಯ ಠಾಕ್ರೆ ಸಿಎಂ ಆಗೋಕೆ?
ಅಧಿಕಾರ ಸಮನಾಗಿ ಹಂಚಿಕೆಯಾಗಬೇಕು, 50:50 ಸೂತ್ರದ ಅಡಿಯಲ್ಲಿ ಸಿಎಂ ಸ್ಥಾನವನ್ನು ಎರಡುವರೆ ವರ್ಷ ಬಳಿಕ ತಮಗೆ ಬಿಟ್ಟುಕೊಡಬೇಕೆಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ಫಲಿತಾಂಶ: ದೇಶಕ್ಕೆ ನರೇಂದ್ರ, ಮಹಾರಾಷ್ಟ್ರಕ್ಕೆ ದೇವೇಂದ್ರ
ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಹಾಗೂ ದೇವೇಂದ್ರ ಫಡ್ನವೀಸ್ ಅವರೊಂದಿಗೆ 50:50 ಸೂತ್ರದ ಬಗ್ಗೆ ಈ ಹಿಂದೆ ಚರ್ಚಿಸಲಾಗಿತ್ತು. 2.5 ವರ್ಷ ಸಿಎಂ ಸ್ಥಾನ ನಮಗೆ ಬಿಟ್ಟುಕೊಡಬೇಕೆಂಬುದು ಯೋಜನೆಯ ಭಾಗವಾಗಿತ್ತು. ಅಧಿಕಾರದ ಸಮ ಹಂಚಿಕೆ ಹಾಗೂ ಸಿಎಂ ಸ್ಥಾನ ಎರಡೂ ನಮಗೆ ಮುಖ್ಯವಾಗಿದ್ದು, ಬಿಜೆಪಿ 50:50 ಸೂತ್ರದ ಬಗ್ಗೆ ಲಿಖಿತ ಭರವಸೆ ನೀಡಬೇಕು ಎಂದು ಉದ್ಧವ್ ಆಗ್ರಹಿಸಿದ್ದಾರೆ.
‘ಮಹಾ ಜನಾದೇಶ’ ಇಲ್ಲ: ಬಿಜೆಪಿಗೆ ಶಿವಸೇನೆ ಚಾಟಿ!
ಒಂದು ವೇಳೆ ಬಿಜೆಪಿ ನಮ್ಮ ಬೇಡಿಕೆಗಳಿಗೆ ಒಪ್ಪದೇ ಇದ್ದಲ್ಲಿ ಬೇರೆ ಆಯ್ಕೆಗಳಿಗೆ ನಾವು ಮುಕ್ತರಾಗಿದ್ದೇವೆ ಎಂದು ಪರೋಕ್ಷ ಎಚ್ಚರಿಕೆಯನ್ನೂ ಶಿವಸೇನೆ ನೀಡಿದೆ.
'ಮಹಾ' ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಕಾಂಗ್ರೆಸ್ನಿಂದ ಶಿವಸೇನೆಗೆ ಬಿಗ್ ಆಫರ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.