ರಾಮ ಮಂದಿರ ಕಟ್ಟದಿದ್ರೆ ಜನ ಚಪ್ಪಲಿಯಿಂದ ಬಡಿತಾರೆ: ಶಿವಸೇನೆ!

Published : Jun 06, 2019, 03:38 PM IST
ರಾಮ ಮಂದಿರ ಕಟ್ಟದಿದ್ರೆ ಜನ ಚಪ್ಪಲಿಯಿಂದ ಬಡಿತಾರೆ: ಶಿವಸೇನೆ!

ಸಾರಾಂಶ

ಬಿಜೆಪಿಗೆ ಮತ್ತೆ ರಾಮ ಮಂದಿರ ನೆನಪಸಿದ ಶಿವಸೇನೆ| ಈ ಬಾರಿ ಮಂದಿರ ಕಟ್ಟಲೇಬೇಕು ಎಂದ ಶಿವಸೇನೆ| ‘ಮಂದಿರ ನಿರ್ಮಾಣ ಮಾಡದಿದ್ದರೆ ಜನ ನಮ್ಮನ್ನು ಚಪ್ಪಲಿಯಲ್ಲಿ ಹೊಡೆಯುತ್ತಾರೆ’| ಬಿಜೆಪಿಗೆ ನೇರ ಎಚ್ಚರಿಕೆ ನೀಡಿದ ಶಿವಸೇನೆ ವಕ್ತಾರ ಸಂಜಯ್ ರಾವತ್| ‘ಸ್ಪಷ್ಟ ಬಹುಮತದ ಪರಿಣಾಮ ರಾಮ ಮಂದಿರ ನಿರ್ಮಾಣ ಖಚಿತ’|

ಮುಂಬೈ(ಜೂ.06): ರಾಮ ಮಂದಿರ ನಿರ್ಮಾಣ ಭರವಸೆಯನ್ನು ಈಡೇರಿಸಿದ್ದರೆ ಜನರೇ ನಮ್ಮನ್ನು ಚಪ್ಪಲಿಯಿಂದ ಹೊಡೆಯುತ್ತಾರೆ ಎಂದು ಮಿತ್ರಪಕ್ಷ ಶಿವಸೇನೆ ಬಿಜೆಪಿಗೆ ಎಚ್ಚರಿಕೆ ನೀಡಿದೆ.

ಈ ಕುರಿತು ಮಾತನಾಡಿರುವ ಶಿವಸೇನೆ ವಕ್ತಾರ ಸಂಜಯ್ ರಾವತ್, 2014ರಲ್ಲೇ ರಾಮ ಮಂದಿರದ ಭರವಸೆ ನೀಡಿದ್ದ ನಾವು ಇದುವರೆಗೂ ಈ ವಾಗ್ದಾನವನ್ನು ಈಡೇರಿಸಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಈ ಬಾರಿಯ ಚುನಾವಣೆಯಲ್ಲೂ ರಾಮ ಮಂದಿರ ಕಟ್ಟುವ ಭರವಸೆ ನೀಡಲಾಗಿದ್ದು, ಒಂದು ವೇಳೆ ಈ ಬಾರಿ ಭರವಸೆ ಈಡೇರಿಸದಿದ್ದರೆ ಜನ ನಮ್ಮನ್ನು ರಸ್ತೆಯಲ್ಲಿ ನಿಲ್ಲಿಸಿ ಚಪ್ಪಲಿಯಿಂದ ಹೊಡೆಯುತ್ತಾರೆ ಎಂದು ರಾವತ್ ಎಚ್ಚರಿಸಿದ್ದಾರೆ.

ಎನ್ ಡಿಎ ಲೋಕಸಭೆಯಲ್ಲಿ 350 ಸೀಟುಗಳನ್ನು ಹೊಂದಿದ್ದು, ಶೀಘ್ರದಲ್ಲಿಯೇ ದೇವಾಲಯ ನಿರ್ಮಾಣವಾಗಲಿದೆ ಎಂಬ ಭರವಸೆ ಇದೆ ಎಂದು ರಾವತ್ ಮಾರ್ಮಿಕವಾಗಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!
ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!