ಸುಕ್ಮಾ: ಕೇಂದ್ರ ಸರ್ಕಾರ ವಿರುದ್ಧ ಶಿವಸೇನೆ ಗರಂ

Published : Apr 27, 2017, 01:20 PM ISTUpdated : Apr 11, 2018, 12:39 PM IST
ಸುಕ್ಮಾ: ಕೇಂದ್ರ ಸರ್ಕಾರ ವಿರುದ್ಧ ಶಿವಸೇನೆ ಗರಂ

ಸಾರಾಂಶ

ಸಿಆರ್’ಪಿಎಫ್ ಜವಾನರ ಹತ್ಯೆಗೆ ಪ್ರತೀಕಾರ ತೀರಿಸುತ್ತೇವೆಯೆಂದು ಹೇಳಿಕೆ ನೀಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ, ಎಂದು ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ರಾಜನಾಥ್ ಸಿಂಗ್ ವಿರುದ್ಧ ಸಾಮ್ನಾ ಸಂಪಾದಕೀಯದಲ್ಲಿ ಟೀಕಿಸಲಾಗಿದೆ.

ಮುಂಬೈ (ಏ.27): ಸುಕ್ಮಾದಲ್ಲಿ ನಕ್ಸಲರು 26 ಯೊಧರನ್ನು ಹತ್ಯೆಗೈದಿರುವ ಘಟನೆಗೆ ಪ್ರತಿಕ್ರಿಯಿಸಿರುವ ಶಿವಸೇನೆ, ಸಮರ್ಪಕವಾದ ಉಗ್ರವಾದ-ವಿರೋಧಿ ನೀತಿಯನ್ನು ರೂಪಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆಯೆಂದು ಹೇಳಿದೆ.

ಸಿಆರ್’ಪಿಎಫ್ ಜವಾನರ ಹತ್ಯೆಗೆ ಪ್ರತೀಕಾರ ತೀರಿಸುತ್ತೇವೆಯೆಂದು ಹೇಳಿಕೆ ನೀಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ, ಎಂದು ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ರಾಜನಾಥ್ ಸಿಂಗ್ ವಿರುದ್ಧ ಸಾಮ್ನಾ ಸಂಪಾದಕೀಯದಲ್ಲಿ ಟೀಕಿಸಲಾಗಿದೆ.

ಉಗ್ರರ ಹೇಯಕೃತ್ಯಕ್ಕೆ ನಮ್ಮ ಯೋಧರು ಬಲಿಯಾಗುತ್ತಿದ್ದಾರೆ. ಛತ್ತೀಸ್’ಘಡದಲ್ಲಿ 26 ಮಂದಿ ಹುತಾತ್ಮರಾಗಿದ್ದಾರೆ.  ಇಂಥ ಕೃತ್ಯಗಳನ್ನು ಸಹಿಸುವುದಿಲ್ಲವೆಂದು ಗೃಹ ಮಂತ್ರಿ ಹೇಳುತ್ತಾರೆ, ಆದರೆ ಕಳೆದ ಒಂದು ತಿಂಗಳಿನಲ್ಲಿ 100 ಮಂದಿ ಯೋಧರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಕೇವಲ ಮಾತುಗಳನ್ನಾಡಿದರೆ ಸಾಲದು, ಪರಿಸ್ಥಿತಿಯನ್ನು ನಿಭಾಯಿಸಲು ಯಾಕೆ ಸಾಧ್ಯವಾಗುತ್ತಿಲ್ಲ? ಎಂದು ಶಿವಸೇನೆ ಪ್ರಶ್ನಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ನಾಯಕರ ಕುಟುಂಬಕ್ಕೆ ಸಂಕಷ್ಟ: ಏನಿದು ಕೇಸ್?
ದೇಶದಲ್ಲಿ ಬಂಗಾರ, ಬೆಳ್ಳಿ ದಾಖಲೆ : ಬೆಲೆ ಏರಿಕೆ ಪರ್ವದ ಹಿಂದಿನ ರಹಸ್ಯ ಏನು?