ಶಿವಸೇನೆಯವರೇ ಮುಂದಿನ ಸಿಎಂ: ಬಿಜೆಪಿಗೆ ಸೇನೆ ಟಾಂಗ್

Published : Jun 20, 2019, 08:35 AM IST
ಶಿವಸೇನೆಯವರೇ ಮುಂದಿನ ಸಿಎಂ: ಬಿಜೆಪಿಗೆ ಸೇನೆ ಟಾಂಗ್

ಸಾರಾಂಶ

ಶಿವಸೇನೆಯವರೇ ಮುಂದಿನ ಸಿಎಂ| ಬಿಜೆಪಿಗೆ ಸೇನೆ ಟಾಂಗ್| ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಸಿಎಂ ಮಾತು!

ಮುಂಬೈ[ಜೂ.20]: ‘ಮಹಾರಾಷ್ಟ್ರದ ಮುಂದಿನ ಮುಖ್ಯ ಮಂತ್ರಿ ಶಿವಸೇನೆ ಅಭ್ಯರ್ಥಿ’ ಎಂದು ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಬರೆದುಕೊಂಡಿದೆ.

ಬಿಜೆಪಿ ಜೊತೆ ಮೈತ್ರಿ ವೇಳೆಯೇ ಇದು ನಿರ್ಧಾರವಾಗಿದೆ. ಶಿವಸೇನೆಯ ಆಡಳಿತದ ವೈಖರಿಯೇ ಭಿನ್ನ ಎಂದು ಪ್ರಕಟಿಸಿದೆ. ಈ ಮೂಲಕ ಬಿಜೆಪಿ ಜೊತೆ ಸಿಎಂ ಹುದ್ದೆ ಸಂಬಂಧ ನೇರಾನೇರ ಹೋರಾಟಕ್ಕೆ ಇಳಿದಿದೆ.

ಕೆಲ ದಿನಗಳ ಹಿಂದಷ್ಟೇ ಬಿಜೆಪಿ ನಾಯಕರು, ಮುಂದಿನ ಸಿಎಂ ನಮ್ಮ ಪಕ್ಷ ದಿಂದಲೇ ಆಗಲಿದ್ದಾರೆ ಎಂದಿದ್ದರು. ಇದೇ ವರ್ಷಾಂತ್ಯಕ್ಕೆ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಿಜೆಪಿ - ಶಿವಸೇನೆ ಮೈತ್ರಿ ಮಾಡಿಕೊಂಡಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಕೆಂಡಾಮಂಡಲ!
ವಿಚ್ಚೇದನ ಪ್ರಕರಣದ ಕ್ಲೈಂಟ್ ಜೊತೆ ರೋಮ್ಯಾಂಟಿಕ್ ರಿಲೇಷನ್‌ ಶಿಪ್‌: ಮಹಿಳಾ ವಕೀಲೆಗೆ ಸುಪ್ರೀಂಕೋರ್ಟ್ ತರಾಟೆ