
ಮುಂಬೈ: ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ಗೊತ್ತುವಳಿ ವೇಳೆ ಗೈರಾಗುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ನೆರವಾಗಿರುವ ಶಿವಸೇನೆ, ಬಿಜೆಪಿ ಸರ್ಕಾರವನ್ನು ಕಟುಕರ ಸರ್ಕಾರ ಎಂದು ಟೀಕಿಸಿದೆ.
ಪಕ್ಷದ ಮುಖ ವಾಣಿ ಸಾಮ್ನಾದಲ್ಲಿ ಬರೆದಿರುವ ಸಂಪಾದಕೀ ಯದಲ್ಲಿ ‘ಹಣಬಲ, ಅಧಿಕಾರ ದುರುಪಯೋಗ, ಇವಿಎಂಗಳನ್ನು ತಿರುಚಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ದೇಶದಲ್ಲಿ ಅಧಿಕಾರದಲ್ಲಿ ಇರುವವರು ಕಟುಕರು.
ಅವರು ಪ್ರಾಣಿಗಳನ್ನು ರಕ್ಷಿಸುತ್ತಾರೆ ಆದರೆ, ಮನುಷ್ಯರನ್ನೇ ಹತ್ಯೆ ಮಾಡುತ್ತಾರೆ. ಹೇಗಾದರೂ ಮಾಡಿ ಅಧಿಕಾರದಲ್ಲಿ ಇರುವುದು ಪ್ರಜಾಪ್ರಭುತ್ವ ಅಲ್ಲ ಎಂದು ಟೀಕಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.