
ಮುಂಬೈ : ಶಿವ ಸೇನಾ ಮುಖಂಡ ಉದ್ದವ್ ಠಾಕ್ರೆ ಶೀಘ್ರದಲ್ಲೇ ಉತ್ತರ ಪ್ರದೇಶ ಭೇಟಿಗೆ ಹೊಸ ಯೋಜನೆಯೊಂದನ್ನು ರೂಪಿಸಿದ್ದಾರೆ.
ಮಂಗಳವಾರ ಶಿವ ಸೇನೆ ಮುಖಂಡರು ಚಲೋ ಅಯೋಧ್ಯೆ, ಚಲೋ ವಾರಣಾಸಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಬಣ್ಣಬಣ್ಣದ ಹೋರ್ಡಿಂಗ್ ಗಳು ಹಾಗೂ ಬಣ್ಣದ ಚಿತ್ರಗಳನ್ನು ಹಾಕಲಾಗಿದ್ದು, ಗಂಗಾ ನದಿ, ರಾಮನ ಚಿತ್ರಗಳು ರಾರಾಜಿಸುತ್ತಿವೆ . ಎಲ್ಲರ ಕಣ್ಮನ ಸೆಳೆಯುವಂತೆ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಅಲ್ಲದೇ ಈ ಯೋಜನೆಯು ರಾಷ್ಟ್ರ ರಾಜಕಾರಣದ ಮಹತ್ವದ ಬದಲಾವಣೆಯನ್ನು ಕಾಣಲಿದೆ. ಭಾರೀ ಬದಲಾವಣೆಗೆ ಈ ಅಭಿಯಾನ ನಾಂದಿ ಹಾಡಲಿದೆ ಎಂದು ಶಿವ ಸೇನಾ ಮುಖಂಡ ಉದ್ದವ್ ಠಾಕ್ರೆ ಹೇಳಿದ್ದಾರೆ. ಅಯೋಧ್ಯಾ, ಕಾಶಿ, ಗಂಗಾ ನದಿಗೆ ಈ ಅಭಿಯಾನವು ಭೇಟಿ ನೀಡಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.