
ಮುಂಬೈ[ಮೇ.26]: ಎನ್ಡಿಎ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿರುವ ಶಿವಸೇನೆ ಮೋದಿ ಅವರ ಸಚಿವ ಸಂಪುಟದಲ್ಲಿ ಕನಿಷ್ಠ ನಾಲ್ಕು ಸಂಸದರಿಗೆ ಸ್ಥಾನ ಸಿಗುತ್ತದೆನ್ನುವ ನಿರೀಕ್ಷೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷ ಮುಖ್ಯಸ್ಥ ಉದ್ಧವ್ ಠಾಕ್ರೆ, ಅವರ ಪುತ್ರ ಆದಿತ್ಯ ಠಾಕ್ರೆ, ಶಿವಸೇನೆ ಕಾರ್ಯದರ್ಶಿ ಮಿಲಿಂದ್ ನಾರ್ವೇಕರ್ ಈಗಾಗಲೇ ನವದೆಹಲಿ ತಲುಪಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ಆರಂಭಿಸಿದ್ದಾರೆ. ಎನ್ಡಿಎಯಲ್ಲಿನ ಮಿತ್ರ ಪಕ್ಷಗಳ ಪೈಕಿ ಶಿವಸೇನೆ ಎರಡನೇ ಅತಿದೊಡ್ಡ ಪಕ್ಷವಾಗಿದ್ದು, ಕಡೇ ಪಕ್ಷ 4 ಸಚಿವ ಸ್ಥಾನ ನೀಡುತ್ತಾರೆನ್ನುವ ನಿರೀಕ್ಷೆ ಶಿವಸೇನೆ ನಾಯಕರದ್ದಾಗಿದೆ.
ಮೋದಿ ಶಿವಸೇನೆಯ ಈ ಬೇಡಿಕೆಯನ್ನು ಪೂರೈಸುತ್ತಾರಾ? ಸಂಪುಟದಲ್ಲಿ 4 ಸ್ಥಾನ ನೀಡುತ್ತಾರಾ? ಈ ಪ್ರಶ್ನೆಗಳಿಗೆ ಕಲವೇ ಉತ್ತರಿಸಲಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.