
ಬೆಳಗಾವಿ[ಆ.2] ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಉತ್ತರ ಕರ್ನಾಟಕ ಅಭಿವೃದ್ದಿಯ ದೃಷ್ಟಿಯಿಂದ ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿಸುವ ಮಾತನಾಡಿದ್ದಕ್ಕೆ ಶಿವಸೇನೆ ಸುಪ್ರೀಂ ಕೋರ್ಟ್ ಗೆ ಹೋಗಬೇಕು ಎಂದು ಹೇಳಿದೆ.
ಮಹಾರಾಷ್ಟ್ರ ಸರ್ಕಾರ ತಕ್ಷಣ ಸುಪ್ರೀಂ ಕೋರ್ಟ್ ಗೆ ತೆರಳಬೇಕು, ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಬೇಕು ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ದಲ್ಲಿ ಆಗ್ರಹಿಸಿದೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಹೆಚ್ಚಿದ ಬೆನ್ನಲ್ಲೇ ಕುಮಾರಸ್ವಾಮಿ ಉತ್ತರ ಕರ್ನಾಟಕ ಅಭಿವೃದ್ದಿ ದೃಷ್ಟಿಯಿಂದ ರಾಜ್ಯದ ಕೆಲ ಪ್ರಮುಖ ಇಲಾಖೆಗಳನ್ನು ಬೆಳಗಾವಿಗೆ ಸ್ಥಳಾಂತರಿಸುತ್ತೇವೆ ಎಂದಿದ್ದರು. ಪ್ರತ್ಯೇಕ ರಾಜ್ಯ ಹೋರಾಟಗಾರರು ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡಿ ಎಂದು ಒತ್ತಾಯಿಸಿದ್ದರು. ಆದರೆ ಬೆಳಗಾವಿ ವಿವಾದ ಇನ್ನು ನ್ಯಾಯಾಲಯದಲ್ಲಿದ್ದು ಕುಮಾರಸ್ವಾಮಿ ಹೇಳಿಕೆ ವಿರುದ್ಧ ಸುಪ್ರೀಂ ಮೆಟ್ಟಿಲೇರಬೇಕು ಎಂಬುದು ಶಿವಸೇನೆ ವಾದ.
ಸಾಮ್ನಾದ ಸಂಪಾದಕೀಯದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಶಿವಸೇನೆ ಕರ್ನಾಟಕದ ವಾದ ಅಥವಾ ಪ್ರತ್ಯೇಕ ರಾಜ್ಯದ ವಿಚಾರ ಏನೇ ಇರಲಿ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಹೋರಾಟ ಮಾಡುತ್ತಿರುವವರು ನ್ಯಾಯಾಲಯದ ಮೊರೆ ಹೋಗಬೇಕು ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.