ಕಾಯಿ ತುರಿಯುವ ಯಂತ್ರಕ್ಕೆ ಸಿಲುಕಿ ಶಿವಮೊಗ್ಗ ಬಾಲಕ ಸಾವು

Published : Oct 30, 2018, 01:15 PM ISTUpdated : Oct 30, 2018, 04:49 PM IST
ಕಾಯಿ ತುರಿಯುವ ಯಂತ್ರಕ್ಕೆ ಸಿಲುಕಿ ಶಿವಮೊಗ್ಗ ಬಾಲಕ ಸಾವು

ಸಾರಾಂಶ

ಶಿವಮೊಗ್ಗ ಕುಂಸಿ ಮೂಲದ ರೂಪೇಶ್‌(17) ಮೃತ ಬಾಲಕ. ಘಟನೆ ಸಂಬಂಧ ನಿರ್ಲಕ್ಷ್ಯ ಹಾಗೂ ಅಪ್ರಾಪ್ತನನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದ ಆರೋಪದಡಿ ಹೋಟೆಲ್‌ ಮಾಲೀಕ ಮಂಜುನಾಥ್‌ ಮತ್ತು ವ್ಯವಸ್ಥಾಪಕ ಲೋಕೇಶ್‌ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು[ಅ.30]: ತೆಂಗಿನಕಾಯಿ ತುರಿಯುವ ಯಂತ್ರಕ್ಕೆ ಸಿಲುಕಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಗಾಂಧಿನಗರದ ಚಾಮುಂಡೇಶ್ವರಿ ಮಿಲ್ಟ್ರೀ ಹೋಟೆಲ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ.

ಶಿವಮೊಗ್ಗ ಕುಂಸಿ ಮೂಲದ ರೂಪೇಶ್‌(17) ಮೃತ ಬಾಲಕ. ಘಟನೆ ಸಂಬಂಧ ನಿರ್ಲಕ್ಷ್ಯ ಹಾಗೂ ಅಪ್ರಾಪ್ತನನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದ ಆರೋಪದಡಿ ಹೋಟೆಲ್‌ ಮಾಲೀಕ ಮಂಜುನಾಥ್‌ ಮತ್ತು ವ್ಯವಸ್ಥಾಪಕ ಲೋಕೇಶ್‌ರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಶಿವಮೊಗ್ಗದ ರೂಪೇಶ್‌ 25 ದಿನಗಳ ಹಿಂದೆ ಮನೆ ಬಿಟ್ಟು ನಗರಕ್ಕೆ ಬಂದಿದ್ದ. ಚಾಮುಂಡೇಶ್ವರಿ ಮಿಲ್ಟ್ರೀ ಹೋಟೆಲ್‌ನಲ್ಲಿ ಮಾಸಿಕ ಏಳು ಸಾವಿರ ವೇತನಕ್ಕೆ ಕೆಲಸಕ್ಕೆ ಸೇರಿದ್ದ. ಅಕ್ಕಿ ಹಿಟ್ಟು ಹಾಗೂ ತೆಂಗಿನಕಾಯಿ ತುರಿಯುವ ಕೆಲಸವನ್ನು ಒಂದೇ ಯಂತ್ರದಲ್ಲಿ ಮಾಡಲಾಗಿತ್ತು. ಭಾನುವಾರ ರಾತ್ರಿ ರೂಪೇಶ್‌ ತೆಂಗಿನಕಾಯಿ ತುರಿಯುವಾಗ ಯಂತ್ರಕ್ಕೆ ಈತನ ಬಟ್ಟೆ ಸಿಲುಕಿಕೊಂಡಿದ್ದು, ಜೋರಾಗಿ ಚೀರಿಕೊಂಡಿದ್ದಾನೆ. ಶಬ್ದ ಕೇಳಿ ಇತರೆ ಹೋಟೆಲ್‌ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ರೂಪೇಶ್‌ ಯಂತ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಎಂದು ಪೊಲೀಸರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ