ಶೋಭ ಜತೆ ಯಡಿಯೂರಪ್ಪ ಕೇರಳಕ್ಕೆ ಹೋಗಿದ್ದೇಕೆ..?

Published : Dec 01, 2018, 04:58 PM ISTUpdated : Dec 01, 2018, 07:01 PM IST
ಶೋಭ ಜತೆ ಯಡಿಯೂರಪ್ಪ ಕೇರಳಕ್ಕೆ ಹೋಗಿದ್ದೇಕೆ..?

ಸಾರಾಂಶ

ತಂತ್ರ-ಮಂತ್ರ ಮಾಡಲು ಶೋಭ ಜೊತೆ ಯಡಿಯೂರಪ್ಪ ಕೇರಳ ಹೋಗಿದ್ದಾರೆ. ಇವರ ಮಾಟ-ಮಂತ್ರದಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗಲ್ಲ ಎಂದಿದ್ದಾರೆ. 

ಶಿವಮೊಗ್ಗ[ಡಿ.01]: ಯಡಿಯೂರಪ್ಪ ಚಿಕಿತ್ಸೆಗಾಗಿ ಕೇರಳಕ್ಕೆ ಹೋಗಿಲ್ಲ, ಬದಲಾಗಿ ಸಮ್ಮಿಶ್ರ ಸರ್ಕಾರ ಬೀಳಿಸಲು ಮಾಟ ಮಾಡಿಸಲು ಹೋಗಿದ್ದಾರೆ. ಆದರೆ ಅದರಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಲೇವಡಿ ಮಾಡಿದ್ದಾರೆ.

"

ತಂತ್ರ-ಮಂತ್ರ ಮಾಡಲು ಶೋಭ ಜೊತೆ ಯಡಿಯೂರಪ್ಪ ಕೇರಳ ಹೋಗಿದ್ದಾರೆ. ಇವರ ಮಾಟ-ಮಂತ್ರದಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗಲ್ಲ ಎಂದಿದ್ದಾರೆ. ಯಡಿಯೂರಪ್ಪ ಪ್ರತಿ ಅಮವಾಸ್ಯೆಗೆ ಕೇರಳಕ್ಕೆ ಹೋಗುತ್ತಾರೆ. ಈಗಾಗಲೇ ಶೋಭ ಕರಂದ್ಲಾಜೆ ಜತೆ ಯಡಿಯೂರಪ್ಪ ಹಲವಾರು ಬಾರಿ ಕೇರಳಕ್ಕೆ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. ರೈತನಾಯಕ ಎಂದು ಹೇಳುವ ಯಡಿಯೂರಪ್ಪ ರೈತರ ಬಗ್ಗೆ ಮಾತನಾಡಲು ಯೊಗ್ಯತೆ ಇಲ್ಲ. ರೈತ ನಾಯಕರು ಯಡಿಯೂರಪ್ಪನವರಿಗೆ ಹಸಿರು ಶಾಲು ಹಾಕಿಕೊಳ್ಳಲು ಬಿಡಬಾರದು. ಸುಳ್ಳು ಹೇಳುವುದರಲ್ಲಿ ಅಪ್ಪ-ಮಕ್ಕಳು ಸದಾ ಮುಂದು ಎಂದು ಬೇಳೂರು ವ್ಯಂಗ್ಯವಾಡಿದ್ದಾರೆ.

ಕುಮಾರ್ ಬಂಗಾರಪ್ಪ ಬಾಯಲ್ಲಿ ಕಡುಬು ಇಟ್ಟುಕೊಂಡಿದ್ದರಾ..? ಬೇಳೂರು ಖಡಕ್ ಪ್ರಶ್ನೆ

ಇನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆಧಿತ್ಯನಾಥ್ ವಿರುದ್ಧ ಹರಿಹಾಯ್ದಿರುವ ಅವರು, ಆಂಜನೇಯ ದಲಿತರ ದೇವರು ಎಂದಿರುವ ಯೋಗಿಗೆ ಹುಚ್ಚು ಹಿಡಿದಿದೆ. ಅಧಿಕಾರದಲ್ಲಿದ್ದವರು ಏನು ಬೇಕಾದರೂ ಹೇಳಬಹುದಾ ಎಂದು ಕಿಡಿಕಾರಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಪಿಎಸ್‌ ಶಾಲೆಗಾಗಿ ಯಾವುದೇ ಕನ್ನಡ ಶಾಲೆ ಮುಚ್ಚುವುದಿಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ
ಸಿಎಂ ಬದಲಿಗೆ ವರಿಷ್ಠರು ಸದ್ಯ ಒಪ್ಪಿಲ್ಲ : ಯತೀಂದ್ರ