ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಮತ್ತೊಂದು ಬಿಗ್ ಶಾಕ್

Published : Jun 07, 2018, 07:44 AM IST
ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಮತ್ತೊಂದು ಬಿಗ್ ಶಾಕ್

ಸಾರಾಂಶ

 ಸ್ನೇಹದ ಹಸ್ತ ಚಾಚುವ ಮೂಲಕ 2019ರ ಲೋಕಸಭಾ ಚುನಾವಣೆಗೂ ಮುನ್ನ ಮೈತ್ರಿಗೆ ಸಿದ್ಧವಾಗಿದ್ದ ಬಿಜೆಪಿಗೆ ಶಿವಸೇನೆ ಶಾಕ್‌ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ ಎಂದು ಶಿವಸೇನೆ ಘೋಷಿಸಿದೆ. 

ಮುಂಬೈ: ಸ್ನೇಹದ ಹಸ್ತ ಚಾಚುವ ಮೂಲಕ 2019ರ ಲೋಕಸಭಾ ಚುನಾವಣೆಗೂ ಮುನ್ನ ಮೈತ್ರಿಗೆ ಸಿದ್ಧವಾಗಿದ್ದ ಬಿಜೆಪಿಗೆ ಶಿವಸೇನೆ ಶಾಕ್‌ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ ಎಂದು ಶಿವಸೇನೆ ಘೋಷಿಸಿದೆ. 

ಸಮರ್ಥನೆಗಾಗಿ ಸಂಪರ್ಕ ಅಭಿಯಾನದ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಭೇಟಿಯಾಗುವುದಕ್ಕೂ ಮುನ್ನವೇ ಈ ಅಂಶವನ್ನು ಶಿವಸೇನೆ ಸ್ಪಷ್ಟಪಡಿಸಿದೆ. ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ಈ ಅಂಶವನ್ನು ಸ್ಪಷ್ಟಪಡಿಸಿದೆ. ಈ ಮೂಲಕ ಸ್ನೇಹದ ಹಸ್ತ ಚಾಚಲು ಮುಂದಾಗಿದ್ದ ಬಿಜೆಪಿಗೆ ಶಾಕ್‌ ನೀಡಿದೆ.

ಈ ನಡುವೆ ಪೂರ್ವನಿಗದಿಯಂತೆ ಬುಧವಾರ ಸಂಜೆ ಅಮಿತ್‌ ಶಾ ಅವರು ಶಿವಸೇನೆ ಅಧ್ಯಕ್ಷ ಉದ್ಧವ್‌ ಠಾಕ್ರೆ ಅವರನ್ನು ಭೇಟಿ ಮಾಡಿ ಮೋದಿ ಸರ್ಕಾರದ 4 ವರ್ಷಗಳ ಸಾಧನೆ ಬಗ್ಗೆ ಮನವರಿಕೆ ಮಾಡಿಕೊಡುವ ಯತ್ನ ನಡೆಸಿದರು.

ಇದಕ್ಕೂ ಮೊದಲು ಶಾ, ಉದ್ಯಮಿ ರತನ್‌ ಟಾಟಾ ಮತ್ತು ನಟಿ ಮಾಧುರಿ ದೀಕ್ಷಿತ್‌ ಅವರನ್ನು ಭೇಟಿಯಾಗಿ ಸರ್ಕಾರದ ಸಾಧನೆಯ ಮಾಹಿತಿ ನೀಡಿದರು. ಆದರೆ ಲತಾ ಮಂಗೇಶ್ಕರ್‌ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಅವರೊಂದಿಗೆ ಭೇಟಿ ಸಾಧ್ಯವಾಗಲಿಲ್ಲ.

ಶಾ ಗುರುವಾರ ಅಕಾಲಿದಳದ ಅಧ್ಯಕ್ಷ ಪ್ರಕಾಶ್‌ಸಿಂಗ್‌ ಬಾದಲ್‌ ಅವರನ್ನೂ ಅಮಿತ್‌ ಶಾ ಭೇಟಿ ಮಾಡಿ ಸರ್ಕಾರದ ಸಾಧನೆಗಳ ಬಗ್ಗೆ ಮನವರಿಕೆ ಮಾಡಿಕೊಡಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!