
ಮುಂಬೈ/ ಪಾಲ್ಘಾರ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮನ್ನು ಭೇಟಿ ಮಾಡಿದ ಮಾರನೇ ದಿನವೇ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ, ಬಿಜೆಪಿಯನ್ನು ಕಟುವಾಗಿ ಟೀಕಿಸಿ ದ್ದಾರೆ. ಇದೆಲ್ಲವೂ ಪೂರ್ಣ ನಾಟಕ ಎಂದು ಕಿಡಿಕಾರಿದ್ದಾರೆ. ಪಾಲ್ಘಾರ್ನಲ್ಲಿ ಪಕ್ಷದ ಕಾರ್ಯಕರ್ತರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಪಾಲ್ಘಾರ್ ನಲ್ಲಿ ಪಕ್ಷದ ಸೋಲಿಗೆ ಪ್ರತಿಕ್ರಿಯಿಸಿದ ಅವರು, ಒಂದು ಉಪಚುನಾ ವಣೆ ಗೆಲ್ಲಲು ಬಿಜೆಪಿ ಏನೇನು ಮಾಡಬೇಕೋ ಅದನ್ನೆಲ್ಲಾ ಮಾಡಿತು ಎಂದು ಪರೋಕ್ಷವಾಗಿ ಇವಿಎಂಗಳ ಅಸಮರ್ಪಕ ಕಾರ್ಯನಿರ್ವಹಣೆ ಯನ್ನು ಪ್ರಸ್ತಾಪಿಸಿದರು.
ಈ ನಡುವೆ 2019ರ ಲೋಕಸಭಾ ಚುನಾ ವಣೆಯಲ್ಲಿ ಏಕಾಂಗಿಯಾಗಿಯೇ ಸ್ಪರ್ಧಿಸು ವುದಾಗಿ ಶಿವಸೇನೆ ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.