ಯುಪಿ ರಾಜಕೀಯಕ್ಕೆ ಮತ್ತೊಂದು ಟ್ವಿಸ್ಟ್!: ಪ್ರಿಯಾಂಕಾ Appointment ಕೇಳಿದ ಯಾದವ್!

Published : Feb 14, 2019, 04:46 PM ISTUpdated : Feb 14, 2019, 05:04 PM IST
ಯುಪಿ ರಾಜಕೀಯಕ್ಕೆ ಮತ್ತೊಂದು ಟ್ವಿಸ್ಟ್!: ಪ್ರಿಯಾಂಕಾ Appointment ಕೇಳಿದ ಯಾದವ್!

ಸಾರಾಂಶ

ಉತ್ತರ ಪ್ರದೇಶದ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಧುಮುಕುತ್ತಿದ್ದಂತೆಯೇ ಮಹತ್ವದ ಬೆಳವಣಿಗೆಗಳು ನಡೆಯಲಾರಂಭಿಸಿವೆ. ಪ್ರಿಯಾಂಕಾ ಗಾಂಧಿ ಎಂಟ್ರಿ ಪ್ರಿ ಪಕ್ಷಗಳಿಗೂ ತಲೆನೋವಾಗಿದೆ. ಸದ್ಯ ಯಾದವ್ ಪ್ರಿಯಾಂಕಾರನ್ನು ಭೇಟಿಯಾಗಲು ಸಮಯಾವಕಾಶ ಕೇಳಿರುವುದು ಭಾರೀ ಸದ್ದು ಮಾಡುತ್ತಿದೆ.

ಲಕ್ನೋ[ಫೆ.14]: ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ರಾಜಕೀಯ ಅಖಾಡಕ್ಕೆ ಧುಮುಕಿತ್ತಿದ್ದಂತೆಯೇ ಅಲ್ಲಿನ ರಾಜಕೀಯವು ಬಹಳಷ್ಟು ತಿರುವುಗಳನ್ನು ಪಡೆಯುತ್ತಿದೆ. ಲೋಕಸಭೆ ಚುನಾವಣೆಗೂ ಮೊದಲು ಇನ್ನೂ ಹಲವಾರು ಬದಲಾವಣೆಗಳಾಗುವ ಸಾಧ್ಯತೆಗಳಿವೆ ಎಂದೂ ಹೇಳಲಾಗುತ್ತಿದೆ. ಈಗಾಗಲೇ ಮಹಾಮೈತ್ರಿ ಮಹತ್ವ ಪಡೆದುಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಶಿವಪಾಲ್ ಸಿಂಗ್ ಯಾದವ್ ಕಾಂಗ್ರೆಸ್ ಜೊತೆ ಕೈಗೂಡಿಲು ಸಜ್ಜಾಗಿದ್ದಾರೆಂಬ ವರದಿ ಸದ್ದು ಮಾಡಿದೆ. 

ಪ್ರಗತಿಶೀಲ ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಹಿರಿಯ ನಾಯಕ ಶಿವಪಾಲ್ ಯಾದವ್ ಪ್ರಿಯಾಂಕಾ ಗಾಂಧಿಗೆ ಕರೆ ಮಾಡಿ, ಭೇಟಿಯಾಗಲು ಸಮಯ ನೀಡುವಂತೆ ಕೇಳಿಕೊಂಡಿದ್ದಾರೆ. ಆದರೆ ತನ್ನ ಬಳಿ ಈಗ ಸಮಯವಿಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಿಯಾಂಕಾ ಗಾಂಧಿ ಮುಂದಿನ 2-3 ದಿನಗಳ ಬಳಿಕವೇ ಭೇಟಿಯಾಗುತ್ತೇನೆಂದು ತಿಳಿಸಿದ್ದಾರೆ.

ಪ್ರಿಯಾಂಕಾರನ್ನು ಭೇಟಿಯಾಗಲು ಸಮಯ ಕೇಳಿರುವ ಶಿವಪಾಲ್ ಯಾದವ್ ಮಹಾಮೈತ್ರಿ ವಿಚಾರವಾಗಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ಅಲ್ಲದೇ 20 ಕ್ಷೇತ್ರಗಳಲ್ಲಿ ಮಾತುಕತೆ ಮೂಲಕ ಹೊಂದಾಣಿಕೆ ಮಾಡಿಕೊಳ್ಳುವ ಪ್ರಸ್ತಾಪವಿದೆ ಎನ್ನಲಾಗಿದೆ. ಅದೇನಿದ್ದರೂ ಮುಂದಿನ ಎರಡು ಮೂರು ದಿನಗಳವರೆಗೆ ಭೇಟಿಯಾಗಲು ತನ್ನ ಬಳಿ ಸಮಯವಿಲ್ಲ ಎಂಬುವುದನ್ನು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು