ಉಲ್ಟಾ ನೇತು ಹಾಕ್ತೇನೆ: ಅಧಿಕಾರಿಗಳಿಗೆ ಸಿಎಂ ಚೌಹಾಣ್ ಎಚ್ಚರಿಕೆ

Published : Jul 26, 2017, 12:13 AM ISTUpdated : Apr 11, 2018, 12:42 PM IST
ಉಲ್ಟಾ ನೇತು ಹಾಕ್ತೇನೆ: ಅಧಿಕಾರಿಗಳಿಗೆ ಸಿಎಂ ಚೌಹಾಣ್ ಎಚ್ಚರಿಕೆ

ಸಾರಾಂಶ

ಭೋಪಾಲ್‌ನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡುವ ವೇಳೆ ಚೌಹಾಣ್ ಈ ಹೇಳಿಕೆ ನೀಡಿದ್ದಾರೆ.

ನವದೆಹಲಿ(ಜು.26): ದಿನ ನಿತ್ಯದ ಕಂದಾಯ ವಿಚಾರಗಳ ಕುರಿತಾದ ಫೈಲ್‌ಗಳನ್ನು ವಿಲೇವಾರಿ ಮಾಡಲು ವಿಳಂಬ ಧೋರಣೆ ಅನುಸರಿಸುವ ಅಧಿಕಾರಿಗಳನ್ನು ತಲೆ ಕೆಳಗಾಗಿ ನೇತು ಹಾಕಬೇಕಾಗುತ್ತದೆ ಎಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಎಚ್ಚರಿಕೆ ನೀಡಿದ್ದಾರೆ. ಭೋಪಾಲ್‌ನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡುವ ವೇಳೆ ಚೌಹಾಣ್ ಈ ಹೇಳಿಕೆ ನೀಡಿದ್ದಾರೆ. ಯಾವುದೇ ವಿವಾದಗಳಿಲ್ಲದ ಆದಾಯ ಸಂಬಂಧಿತ ಫೈಲ್‌ಗಳನ್ನು ಒಂದು ತಿಂಗಳಿಗಿಂತ ಹೆಚ್ಚಿನ ಅವಧಿ ತಮ್ಮ ಬಳಿಯೇ ಇಟ್ಟುಕೊಂಡಿರುವುದು ತಮ್ಮ ಗಮನಕ್ಕೆ ಬಂದಲ್ಲಿ, ಅಂಥ ಅಧಿಕಾರಿಗಳನ್ನು ತಲೆ ಕೆಳಗಾಗಿ ನೇತು ಹಾಕಲಾಗುತ್ತದೆ ಎಂದಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್ ಅವರ ಹೇಳಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮಾಡಿದೆ. ಸರ್ಕಾರ ತನ್ನ ವಿಫಲತೆಗಳನ್ನು ನೌಕರರ ಮೇಲೆ ಹಾಕಲು ಬಿಜೆಪಿ ಯತ್ನಿಸುತ್ತಿದೆ. ಅಧಿಕಾರಿಗಳ ವಿರುದ್ಧದ ಸಿಎಂ ಹೇಳಿಕೆ ಅವರ ಹತಾಶೆಯ ಭಾವನೆಯನ್ನು ಎತ್ತಿ ತೋರುತ್ತದೆ ಎಂದು ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

AI4Agri 2026: ಭಾರತದ ಮುಂದಿನ ಕೃಷಿ ಕ್ರಾಂತಿಗೆ AI ಸಾಥ್: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದೇನು?
Imran Masood: ಮೋದಿಗೆ ಟ್ರಂಪ್ ಅಂದ್ರೆ ಭಯ, ತಮ್ಮವರ ಮೇಲೆಯೇ ದಾಳಿ: ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಕಿಡಿ