
ನವದೆಹಲಿ (ಜ.01): ನರೇಂದ್ರ ಮೋದಿಯವರ ವಿರುದ್ಧ ಟೀಕಾಪ್ರಹಾರವನ್ನು ಮುಂದುವರಿಸಿರುವ ಮಿತ್ರಪಕ್ಷ ಶಿವಸೇನೆಯು, ಪ್ರಧಾನಿಯ ಹೊಸ ವರ್ಷದ ಭಾಷಣದಲ್ಲಿ ಯಾವುದೇ ಹೊಸವಿಚಾರಗಳಿಲ್ಲವೆಂದು ಹೇಳಿದೆ.
ಅವರಿಂದ ಬಹಳಷ್ಟು ನಿರೀಕ್ಷೆಗಳಿತ್ತು, ಆದರೆ ಅವೆಲ್ಲಾವನ್ನು ಅವರು ಹುಸಿಗೊಳಿಸಿದ್ದಾರೆ. ತಾವು ಯುದ್ಧಭೂಮಿಯಲ್ಲಿದ್ದೇವೆ ಎಂಬಂತೆ ಜನರು ನಂಬಿಸಲು ಪ್ರಧಾನಿ ಪ್ರಯತ್ನಪಡುತ್ತಿದ್ದಾರೆ, ಎಂದು ಶಿವಸೇನೆ ಮುಖಂಡೆ ಮನೀಶಾ ಕಾಯಂಡೆ ಹೇಳಿದ್ದಾರೆ.
ಆದಾಯ ತೆರಿಗೆ ಹಾಗೂ ಇನ್ನಿತರ ಮುಖ್ಯ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಲೇ ಇಲ್ಲ, ಎಂದು ಅವರು ಟೀಕಿಸಿದ್ದಾರೆ.
ನಿನ್ನೆ ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ರೈತರಿಗೆ, ಗರ್ಭವತಿ ಮಹಿಳೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ಜನಪ್ರಿಯ ಯೋಜನೆಗಳನ್ನು ಘೋಷಿಸಿದ್ದರು. ಅವರ ಭಾಷಣಕ್ಕೆ ರಾಜಕೀಯ ಪಕ್ಷಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.