
ಪಣಜಿ: ಗೋವಾ ಶಿವಸೇನೆ ಅಧ್ಯಕ್ಷ ಶಿವಪ್ರಸಾದ್ ಜೋಶಿ ಅವರು ಕನ್ನಡಿಗರ ಬಗ್ಗೆ ಆಡಿರುವ ತುಚ್ಛ ಮಾತುಗಳು ಹಾಗೂ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರನ್ನು ಬೆಂಬಲಿಸಿ ಆಡಿರುವ ಮಾತುಗಳನ್ನು ಗೋವಾ ಕಾಂಗ್ರೆಸ್ ಘಟಕ ಖಂಡಿಸಿದೆ.
‘ಹಲವು ಕನ್ನಡಿಗರಿಗೆ ರಾಷ್ಟ್ರಗೀತೆ ಹಾಡಲೂ ಬರಲ್ಲ. ರಾಷ್ಟ್ರಪಿತರ ಬಗ್ಗೆ ಅವರಿಗೆ ಅರಿವೇ ಇಲ್ಲ' ಎಂಬ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಗೋವಾ ಕಾಂಗ್ರೆಸ್ ವಕ್ತಾರ ಸುನೀಲ್ ಕವಠಂಕರ್, ‘ಇದು ದುರದೃಷ್ಟಕರ ಮತ್ತು ಖಂಡನಾರ್ಹ ಹೇಳಿಕೆ. ಈ ಹಿಂದೆ ಗೋವಾ ಮರಾಠಿ ಪಠ್ಯದಲ್ಲಿ ರಾಷ್ಟ್ರಗೀತೆ ಅರ್ಧ ಮುದ್ರಣವಾದಾಗ ಶಿವಸೇನೆಯ ದೇಶಭಕ್ತಿ ಎಲ್ಲಿ ಹೋಗಿತ್ತು?' ಎಂದು ಪ್ರಶ್ನಿಸಿದ್ದಾರೆ.
‘ಇನ್ನು ಪ್ರಮೋದ ಮುತಾಲಿಕ್ರನ್ನು ಮಹಿಳೆಯರ ರಕ್ಷಕ ಎಂದಿರುವ ಜೋಶಿ ಅವರ ಧೋರಣೆಯು ಶಿವಸೇನೆಯ ಮನಃಸ್ಥಿತಿ ತೋರಿಸುತ್ತದೆ. ನೈತಿಕ ಪಹರೆದಾರರು ಆತ್ಮಾವಲೋಕನ ಮಾಡಿಕೊಳ್ಳಬೇಕು' ಎಂದು ಕವಠಂಕರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.