ಸಂಪುಟದಲ್ಲಿ ಸಚಿವ ಸ್ಥಾನ ನೀಡದ್ದಕ್ಕೆ ಶಿವಸೇನೆ ಅಸಮಾಧಾನ; ಪದಗ್ರಹಣ ಸಮಾರಂಭಕ್ಕೆ ಬಹಿಷ್ಕಾರ

Published : Sep 03, 2017, 06:24 PM ISTUpdated : Apr 11, 2018, 12:54 PM IST
ಸಂಪುಟದಲ್ಲಿ ಸಚಿವ ಸ್ಥಾನ ನೀಡದ್ದಕ್ಕೆ ಶಿವಸೇನೆ ಅಸಮಾಧಾನ; ಪದಗ್ರಹಣ ಸಮಾರಂಭಕ್ಕೆ ಬಹಿಷ್ಕಾರ

ಸಾರಾಂಶ

ಸಂಪುಟದಲ್ಲಿ ತಮ್ಮ ಸಂಸದರಿಗೆ ಸ್ಥಾನ ನೀಡದಕ್ಕೆ  ಬಿಜೆಪಿ ಮಿತ್ರಪಕ್ಷ ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದ್ದು ನೂತನ ಸಚಿವರ ಪದಗ್ರಹಣ ಸಮಾರಂಭವನ್ನು ಬಹಿಷ್ಕರಿಸಿದೆ.

ಬೆಂಗಳೂರು (ಸೆ.03): ಸಂಪುಟದಲ್ಲಿ ತಮ್ಮ ಸಂಸದರಿಗೆ ಸ್ಥಾನ ನೀಡದಕ್ಕೆ  ಬಿಜೆಪಿ ಮಿತ್ರಪಕ್ಷ ಶಿವಸೇನೆ ಅಸಮಾಧಾನ ವ್ಯಕ್ತಪಡಿಸಿದ್ದು ನೂತನ ಸಚಿವರ ಪದಗ್ರಹಣ ಸಮಾರಂಭವನ್ನು ಬಹಿಷ್ಕರಿಸಿದೆ.

ಪೂರ್ಣ ಪ್ರಮಾಣದ ಪುನಾರಚನೆ ಇಲ್ಲ:

ಜೆಡಿಯು ಮತ್ತು ಎಐಎಡಿಎಂಕೆ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ವಿಷಯದಲ್ಲಿ ಗೊಂದಲ ಮುಂದುವರಿದಿದ್ದರಿಂದ ಪ್ರಧಾನಿ ಮೋದಿ ಅಂದುಕೊಂಡಂತೆ ದೊಡ್ಡ ಗಾತ್ರದ ಸಂಪುಟ ಪುನಾರಚನೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದ್ದು, ಅಕ್ಟೋಬರ್‌ ಕೊನೆಗೆ ಅಥವಾ ನವೆಂಬರ್‌ ತಿಂಗಳಲ್ಲಿ ಮತ್ತೊಮ್ಮೆ ಪುನಾರಚನೆ ಮಾಡುವ ಸಾಧ್ಯತೆಗಳಿದ್ದು, ಆಗ ರಾಜ್ಯದ ಮತ್ತೊಬ್ಬ ಪ್ರತಿನಿಧಿಗಳಿಗೆ ಪ್ರಾತಿನಿಧ್ಯ ಸಿಗುವ ಸಂಭವವಿದೆ ಎಂದು ಹೇಳಲಾಗುತ್ತಿದೆ.

ಕನಿಷ್ಟ 20 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಅಷ್ಟೇ ಸಂಖ್ಯೆಯ ಹೊಸ ಮುಖಗಳಿಗೆ ಅವಕಾಶ ನೀಡಬೇಕು ಮತ್ತು ಹಾಲಿ ಸಚಿವರ ಖಾತೆಗಳನ್ನು ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಮಾಡುವ ಮೂಲಕ ಸಂಪುಟಕ್ಕೆ ಹೊಸ ಲುಕ್‌ ಕೊಡಬೇಕು. ಈ ಹೊಸ ಟೀಂ ಜತೆ 2019ರ ಚುನಾವಣೆಗೆ ಸಿದ್ಧವಾಗಬೇಕು ಎಂಬ ವಿಚಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇತ್ತು ಎನ್ನಲಾಗಿದ್ದು, ಆದರೆ, ಜೆಡಿಯು ಮತ್ತು ಎಐಎಡಿಎಂಕೆ ಸದಸ್ಯರ ಸಂಪುಟ ಸೇರ್ಪಡೆ ವಿಷಯದಲ್ಲಾದ ಗೊಂದಲದಿಂದಾಗಿ ಸದ್ಯಕ್ಕೆ ಸಣ್ಣ ಪ್ರಮಾಣದ ಪುನಾರಚನೆ ಮಾಡಿ ಮುಗಿಸುವ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಗೊತ್ತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!