
ಬೆಂಗಳೂರು (ಮಾ. 20): ರಾಹುಲ್ ಗಾಂಧಿ ಕರಾವಳಿ ಭೇಟಿ ಬಗ್ಗೆ ಶೋಭಾ ಕರಂದ್ಲಾಜೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರ ಕೊಡಲಿ ಎಂದು ಸವಾಲು ಹಾಕಿದ್ದಾರೆ.
ರಾಹುಲ್ ಗಾಂಧಿಯವರೇ, ಕರಾವಳಿ ಪ್ರದೇಶದಲ್ಲಿ ನಡೆದ ಹಿಂದೂಗಳ ಹತ್ಯೆಯ ಬಗ್ಗೆ ನಿಮ್ಮ ನಿಲುವೇನು? ಹತ್ಯೆಯ ಆರೋಪಿಗಳಿಗೆ ರಕ್ಷಣೆ ನೀಡುವ ಕೆಲಸವನ್ನು CM ಮಾಡುತ್ತಿದ್ದಾರೆ. ಈ ಬಗ್ಗೆ ನೀವೇನು ಹೇಳುತ್ತೀರಿ? ಕರಾವಳಿಯ ಇಂದಿನ ಸ್ಥಿತಿಗೆ ಮರಳು ಮಾಪಿಯಾ & ಡ್ರಗ್ ಮಾಫಿಯಾ ಕರಾವಳಿ ಕಲುಷಿತವಾಗಲು ಕಾರಣ. ಒಪ್ಪುತ್ತೀರಾ?
ಜನಾರ್ದನ್ ಪೂಜಾರಿಯವರ ಇಂದಿನ ಸ್ಥಿತಿಗೆ ರಾಮನಾಥ್ ರೈ ಕಾರಣ, ಈ ವೇಳೆ ಪೂಜಾರಿ ಅವರಿಗೆ ಏನನ್ನೂ ಹೇಳಲು ಬಯಸುತ್ತೀರಾ ? ಕರಾವಳಿಯ ಪ್ರಕ್ಷುಬ್ಧ ವಾತಾವರಣಕ್ಕೆ ಕಾರಣವಾದ ಪಿಎಫ್’ಐ ಕಾರಣ. ಇಂತವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಮಾಡಲು ಅವಕಾಶ ಕೊಟ್ಟು, ರಕ್ಷಣೆಗೆ ನೀಡುತ್ತಿದ್ದಾರೆ. ಈ ಬಗ್ಗೆ ಏನು ಹೇಳುತ್ತೀರಾ?
ಕಲಡ್ಕ ಪ್ರಭಾಕರ್ ಭಟ್ ಅವರು ನಡೆಸುತ್ತಿದ್ದ ಶಾಲೆಗೆ ಬಿಸಿ ಊಟ ನಿಲ್ಲಿಸಿ, ಶಾಲಾ ಮಕ್ಕಳ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡಿದ್ದೀರಾ? ಇದು ಸರಿನಾ? ಈ ಮೇಲಿನ ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.