'ರುದ್ರೇಶ್ ಕೊಲೆಗೆ ಸೇಡು ತೀರಿಸಿಕೊಳ್ಳಬೇಕು' ಸಾರ್ವಜನಿಕ ಕಾರ್ಯಕ್ರಮದಲ್ಲಿ ಶೋಭಾ ಕರಂದ್ಲಾಜೆ ವಿವಾದಾತ್ಮಕ ನುಡಿ

Published : Mar 12, 2017, 06:35 AM ISTUpdated : Apr 11, 2018, 01:07 PM IST
'ರುದ್ರೇಶ್ ಕೊಲೆಗೆ ಸೇಡು ತೀರಿಸಿಕೊಳ್ಳಬೇಕು' ಸಾರ್ವಜನಿಕ ಕಾರ್ಯಕ್ರಮದಲ್ಲಿ ಶೋಭಾ ಕರಂದ್ಲಾಜೆ ವಿವಾದಾತ್ಮಕ ನುಡಿ

ಸಾರಾಂಶ

ಬಿಜೆಪಿ ಸಂಸದೆ  ಶೋಭಾ ಕರಂದ್ಲಾಜೆ ಒಂದಿಷ್ಟು ವಿವಾದಕ್ಕೆ ಎಡೆಮಾಡಿ ಕೊಡಬಹುದಾದ ರೀತಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ್ದಾರೆ.

ಬೆಂಗಳೂರು(ಮಾ.12): ಬಿಜೆಪಿ ಸಂಸದೆ  ಶೋಭಾ ಕರಂದ್ಲಾಜೆ ಒಂದಿಷ್ಟು ವಿವಾದಕ್ಕೆ ಎಡೆಮಾಡಿ ಕೊಡಬಹುದಾದ ರೀತಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶೋಭಾ, ಇತ್ತೀಚೆಗೆ ನಡೆದ ಶಿವಾಜಿನಗರದ ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆಗೆ ಸೇಡು ತೀರಿಸಿಕೊಳ್ಳಬೇಕು, ರುದ್ರೇಶ್ ಅವರ ಸಾವು ವ್ಯರ್ಥ ಆಗಬಾರದು ಎಂದು ಹೇಳಿದ್ದಾರೆ. ಶಿವಾಜಿನಗರ ಮಂಡಲ ಮಹಿಳಾ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕರಂದ್ಲಾಜೆ, ರುದ್ರೇಶ್ ಅವರನ್ನು ರಾಜಕೀಯವಾಗಿ ಹತ್ಯೆ ಮಾಡಿದವರನ್ನು ಸಮ್ಮನೆ ಬಿಡಲ್ಲ, ನಮಗೆ ಸೇಡು ತೀರಿಸಿಕೊಳ್ಳಲು ಮುಂದಿನ ಚುನಾವಣೆಯಲ್ಲಿ ಅವಕಾಶ ಸಿಗುತ್ತೆ, ಚುನಾವಣೆಗೆ ಇನ್ನು ಒಂದು ವರ್ಷ ಇದ್ದರೂ ಆರೇ ತಿಂಗಳಲ್ಲಿ ಚುನಾವಣೆ ಬರಬಹುದು, ಸಿದ್ದರಾಮಯ್ಯ ಅವರನ್ನು ಕು ಬಿಟ್ಟು ಓಡಿಸಬೇಕು, ಅದಕ್ಕಾಗಿ ಶಿವಾಜಿನಗರದಲ್ಲಿ ನಮ್ಮ ಒಬ್ಬ ಶಾಸಕ ಬರಬೇಕು' ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ