ಕೇಂದ್ರಕ್ಕೆ ಬರೆದ ಪತ್ರದಲ್ಲಿ ಬದುಕಿದ್ದವರನ್ನೂ ಸತ್ತಿದ್ದಾರೆಂದು ನಮೂದಿಸಿದ ಶೋಭಾ ಕರಂದ್ಲಾಜೆ!

Published : Jul 19, 2017, 12:10 PM ISTUpdated : Apr 11, 2018, 12:45 PM IST
ಕೇಂದ್ರಕ್ಕೆ ಬರೆದ ಪತ್ರದಲ್ಲಿ ಬದುಕಿದ್ದವರನ್ನೂ ಸತ್ತಿದ್ದಾರೆಂದು ನಮೂದಿಸಿದ ಶೋಭಾ ಕರಂದ್ಲಾಜೆ!

ಸಾರಾಂಶ

ರಾಜ್ಯದಲ್ಲಿ ಕೋಮು ಗಲಭೆಯನ್ನು ಪ್ರಸ್ತಾಪಿಸುವ ಭರದಲ್ಲಿ ಸಂಸದೆ ಬಿಜೆಪಿ ಯಡವಟ್ಟು ಮಾಡಿಕೊಂಡಿದ್ದಾರೆ. ಕೇಂದ್ರವನ್ನು ಓಲೈಸುವ ಭರದಲ್ಲಿಯೋ ಅಥವಾ ಕಾಂಗ್ರೆಸ್ ಸರಕಾರವನ್ನು ಹಣಿಯುವ ಭರದಲ್ಲೋ ಯಾವುದೇ ಪರಿಶೀಲನೆ ಮಾಡದೆ ಔಪಚಾರಿಕವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್'ಗೆ ಬರೆದ ಪತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಡವಟ್ಟು ಸ್ಪಷ್ಟವಾಗಿ ಕಂಡು ಬಂದಿದೆ. ಬಿಜೆಪಿಯ ಈ ಯಡವಟ್ಟು ಮತ್ತಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಬೆಂಗಳೂರು(ಜು.19): ರಾಜ್ಯದಲ್ಲಿ ಕೋಮು ಗಲಭೆಯನ್ನು ಪ್ರಸ್ತಾಪಿಸುವ ಭರದಲ್ಲಿ ಸಂಸದೆ ಬಿಜೆಪಿ ಯಡವಟ್ಟು ಮಾಡಿಕೊಂಡಿದ್ದಾರೆ. ಕೇಂದ್ರವನ್ನು ಓಲೈಸುವ ಭರದಲ್ಲಿಯೋ ಅಥವಾ ಕಾಂಗ್ರೆಸ್ ಸರಕಾರವನ್ನು ಹಣಿಯುವ ಭರದಲ್ಲೋ ಯಾವುದೇ ಪರಿಶೀಲನೆ ಮಾಡದೆ ಅನೌಪಚಾರಿಕವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್'ಗೆ ಬರೆದ ಪತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಡವಟ್ಟು ಸ್ಪಷ್ಟವಾಗಿ ಕಂಡು ಬಂದಿದೆ. ಬಿಜೆಪಿಯ ಈ ಯಡವಟ್ಟು ಮತ್ತಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಸಂಸದೆ ಬರೆದ ಪತ್ರದಲ್ಲಿ ಬದುಕಿದ್ದವರನ್ನೂ ಕೊಲೆಯಾದವರ ಪಟ್ಟಿಯಲ್ಲಿ ಶೋಭಾ ಕರಂದ್ಲಾಜೆ ಮಾಡಿದ್ದಾರೆ. ಅಲ್ಲದೆ ಬೇರೆ ಬೇರೆ ಕಾರಣದಿಂದ ಸತ್ತವರನ್ನೂ ಕೋಮು ಗಲಭೆಯ ಪಟ್ಟಿಗೆ ಸೇರಿಸಿದ್ದಾರೆ. ಪತ್ರದಲ್ಲಿ ಹಲ್ಲೆಯಾದವರ, ವೈಯುಕ್ತಿಕ ಸಂಘರ್ಷದಿಂದಾಗಿ ಬಲಿಯಾದವರು, ರಸ್ತೆಯಲ್ಲಿ ಕಂಠ ಪೂರ್ತಿ ಕುಡಿದು ಅಪಘಾತದಲ್ಲಿ ಮೃತಪಟ್ಟವರ ಹೆಸರನ್ನೂ 'ಕೋಮು ಗಲಭೆ'ಯಲ್ಲಿ ಸತ್ತಿದ್ದಾರೆ ಎಂದು ತಮ್ಮ ಪತ್ರದ ಮೂಲಕ ಶೋಭಾ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದರು ಕಾಂಗ್ರೆಸ್ ಪಕ್ಷ ಹೀಗೆ ಮಾಡಿರುವ ಹಿಂದಿರುವ ಉದ್ದೇಶವೇನು ಎಂಬ ಪ್ರಶ್ನೆಯನ್ನು ಎತ್ತಿದೆ.

ಇನ್ನು ಈ ಕುರಿತಾಗಿ ಪ್ರತಿಕ್ರಿಸಿರುವ ಸಂಸದೆ ಶೋಭಾ ಇದು ಕೈ ತಪ್ಪಿನಿಂದಾದ ಯಡವಟ್ಟು ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ಇನ್ನು ಮೃತಪಡದ ವ್ಯಕ್ತಿಯನ್ನೂ ಸತ್ತಿದ್ದಾರೆ ಎಂದು ಬಿಂಬಿಸುವುದು ಅತ್ಯಂತ ಅಮಾನವೀಯ ಕೆಲಸ. ಇನ್ನು ಜವಾಬದಾರಿಯುತ ಸ್ಥಾನದಲ್ಲಿರುವ ಸಂಸದೆಯೊಬ್ಬರು ಕೇಂದ್ರದ ಗೃಹಸಚಿವರಿಗೆ ಬರೆದ ಪತ್ರದಲ್ಲಿ ಇಂತಹ ಯಡವಟ್ಟು ಮಾಡಿರುವುದು ನಿಜಕ್ಕೂ ದೊಡ್ಡ ತಪ್ಪು ಎಂಬ ಮಾತುಗಳು ಈಗ ಕೇಳಿ ಬಂದಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Charmadi Ghat Fire ಚಾರ್ಮಾಡಿ ಘಾಟಿಯಲ್ಲಿ ಹೊತ್ತಿಕೊಂಡ ಬೆಂಕಿ; ನೂರಾರು ಎಕರೆ ಅರಣ್ಯ, ಪ್ರಾಣಿ-ಪಕ್ಷಿಗಳು ಭಸ್ಮ?
ಶಿವಮೊಗ್ಗದಲ್ಲಿ ವೀಣಾ ತ್ರಿಶತೋತ್ಸವ ಕಾರ್ಯಕ್ರಮ: ಸಂಸದ ಯದುವೀರ್ ವೀಣಾವಾದನಕ್ಕೆ ಗಾನಗಂಧರ್ವ ಲೋಕ ಸೃಷ್ಟಿ!