
ಬೆಂಗಳೂರು (ಡಿ.12): ಪರೇಶ್ ಮೆಸ್ತಾ ಹತ್ಯೆಯನ್ನು ಖಂಡಿಸಿ ರಾಜಭವನದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಸಲ್ಮಾನ ಗೂಂಡಾಗಳು ಲಾಠಿ, ತಲ್ವಾರ್ ಹಿಡಿದುಕೊಂಡು ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಪರೇಶ್ ಮೇಸ್ತಾ ಕೊಲೆಯನ್ನು ಮುಚ್ಚಿಹಾಕುವ ವ್ಯವಸ್ಥಿತ ಷಡ್ಯಂತ್ರವನ್ನು ಸರ್ಕಾರ ಮಾಡುತ್ತಿದೆ. ಹೊನ್ನಾವರಕ್ಕೆ ಹೋಗಿ ಸಿಎಂ ಪರೇಶ್ ಮೇಸ್ತಾ ಹೆಣದ ಮೇಲೆ ಶಿಲಾನ್ಯಾಸ ನೆರವೇರಿಸಿ ಬಂದಿದ್ದಾರೆ. ಜಿಹಾದಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಸಿಎಂ ಬೆನ್ನೆಲುಬಾಗಿ ನಿಂತಿದ್ದಾರೆ. ಹೀಗಾಗಿ ಹಿಂದೂ ಕಾರ್ಯಕರ್ತರನ್ನು ಹಾಡುಹಗಲೇ ಅಟ್ಟಾಡಿಸಿಕೊಂಡು ಕೊಲ್ಲುತ್ತಿದ್ದಾರೆ. ಈ ಕೇಸನ್ನು ಮುಚ್ಚಿ ಹಾಕಿದರೆ ಇಡೀ ಕರಾವಳಿ ಹೊತ್ತಿ ಉರಿಯುತ್ತೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.