
ಬೆಂಗಳೂರು(ಮಾ.09): ಖಾಸಗಿ ವಾಹಿನಿಯೊಂದರಲ್ಲಿ ಹಿಂದು ಭಕ್ತಿಗೀತೆ ಹಾಡಿದ್ದ ಮುಸ್ಲಿಂ ಯುವತಿ ಸುಹನಾ ಸೈಯದ್'ಗೆ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಬೆಂಬಲ ನೀಡಿದ್ದಾರೆ.
ನಿನ್ನೆಯಷ್ಟೇ ಈಕೆ ಹಿಂದೂ ಭಕ್ತಿಗೀತೆ ಹಾಡಿದ್ದಳು ಎಂಬ ಕಾರಣದಿಂದ ಸಾಮಾಜಿಕ ಜಾಲಾತಾಣಗಳಲ್ಲಿ ಬೆದರಿಕೆ ಹಾಕಿದ್ದ ವಿಚಾರ ವರದಿಯಾಗಿತ್ತು. ಈ ವೇಳೆ ಹಲವಾರು ಮಂದಿ ಈ ಯುವತಿಯ ಬೆಂಬಲಕ್ಕೆ ನಿಂತಿದ್ದರು. ಇದೀಗ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಕೂಡಾ ಈಕೆಯ ಬೆಂಬಲಕ್ಕೆ ನಿಂತಿದ್ದು 'ಸುಹಾನಗೆ ಮತಾಂಧರು ಬೆದರಿಕೆ ಹಾಕುತ್ತಿದ್ದಾರೆ ಆದರೂ ಸಿಎಂ ಸಿದ್ದರಾಮಯ್ಯ ಮಾತನಾಡದೆ, ಮೌನಕ್ಕೆ ಶರಣಾಗಿದ್ದಾರೆ. ಸಿಎಂ ಕೂಡಲೇ ಸುಹಾನ ರಕ್ಷಣೆಗೆ ಕ್ರಮ ಕೈಗೊಳ್ಳಲಿ. ಇದರಲ್ಲೂ ವೋಟ್ ಬ್ಯಾಂಕ್ ರಾಜಕಾರಣದ ಯೋಚನೆ ಮಾಡದಿರಲಿ. ಸುಹಾನಗೆ ರಕ್ಷಣೆ ನೀಡಿದರೆ ಮುಸಲ್ಮಾನರಿಗೆ ನೋವಾಗುತ್ತದೆ ಎಂದು ಯೋಚಿಸುವುದು ಬೇಡ. ಸುಹಾನಾ ರಕ್ಷಣೆ ಮಾಡುವುದು ರಾಜ್ಯ ಸರ್ಕಾರದ ಹೊಣೆ. ಸುಹಾನ ಜೊತೆ ನಾವಿದ್ದೇವೆ' ಎಂದು ಬಿಜೆಪಿ ಕಚೇರಿ ಬಳಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.