
ಬೆಂಗಳೂರು(ಆ.11): ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ನಿನ್ನೆ ರಾತ್ರಿ ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದ ಕ್ರಿಮಿನಲ್'ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ನಗರದ ಹೊರವಲಯದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಡಿ ರೋಡ್ ಬಳಿ ಶೂಟೌಟ್ ನಡೆದಿದೆ. ಕುಖ್ಯಾತ ಕಿಡ್ನಾಪರ್ ವಿಜಯ್ ಅಂಡ್ ಅವನ ಗ್ಯಾಂಗ್ ಡಿ ರೋಡಲ್ಲಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬ್ಯಾಡರಹಳ್ಳಿ ಪೊಲೀಸ್ರು ಬಂಧಿಸಲು ಮುಂದಾದ್ರು. ಆದ್ರೆ ಈ ವೇಳೆ ಖತರ್ನಾಕ್ ಗ್ಯಾಂಗ್ ಪೊಲೀಸರ ಮೇಲೆಯೇ ಮುಗಿಬಿದ್ದಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಬ್ಯಾಡರಹಳ್ಳಿ ಸಬ್ ಇನ್ಸ್ಪೆಕ್ಟರ್ ದಾಳೇಗೌಡ ಒಂದು ಸುತ್ತು ಗುಂಡು ಹಾರಿಸಿದ್ದಾರೆ.
ವಿಜಯನ ಅಟ್ಟಹಾಸ ಮುಂದುವರೆದಾಗ ಇನ್ಸ್ಪೆಕ್ಟರ್ ಸತ್ಯನಾರಾಯಣ ವಿಜಯ್ ಬಲಗಾಲಿಗೆ ಶೂಟ್ ಮಾಡಿದ್ದಾರೆ. ಗುಂಡೇಟು ತಿಂದ ವಿಜಯ್ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆತನ ಸಹಚರರಾದ ಹರೀಶ್, ನವೀನ್, ಬಳ್ಳಾರಿ ಹಾಗೂ ವಿಜಯ್ ಎಂಬುವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಪೇದೆ ಭೈರಪ್ಪಗೆ ಗಾಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.