ಕನ್ನಡ ಫಲಕವಿಲ್ಲದ ಅಂಗಡಿ ಪರವಾನಗಿ ರದ್ದು?

Published : Jul 18, 2017, 09:52 AM ISTUpdated : Apr 11, 2018, 12:41 PM IST
ಕನ್ನಡ ಫಲಕವಿಲ್ಲದ ಅಂಗಡಿ ಪರವಾನಗಿ ರದ್ದು?

ಸಾರಾಂಶ

ಕನ್ನಡ ನಾಮಫಲಕ ಅಳವಡಿಸದ ಅಂಗಡಿ ಮುಂಗಟ್ಟುಗಳ ಪರವಾನಗಿ ರದ್ದುಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ.

ಬೆಂಗಳೂರು(ಜು.18): ಕನ್ನಡ ನಾಮಫಲಕ ಅಳವಡಿಸದ ಅಂಗಡಿ ಮುಂಗಟ್ಟುಗಳ ಪರವಾನಗಿ ರದ್ದುಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ.

ಅಂಗಡಿ- ಮುಂಗಟ್ಟುಗಳ ಶೇ.60 ರಷ್ಟು ಭಾಗ ನಾಮಫಲಕ ಕನ್ನಡದಲ್ಲಿರಬೇಕು. ಕನ್ನಡ ಬಳಸದ ಅಂಗಡಿಗಳ ಪರವಾನಗಿ ರದ್ದುಗೊಳಿಸಬೇಕು ಮತ್ತು ಪಾಲಿಕೆಯಿಂದ ದಿನಪತ್ರಿಕೆಗಳಿಗೆ ನೀಡುವ ಜಾಹೀರಾತುಗಳನ್ನು ಕನ್ನಡದಲ್ಲಿಯೇ ನೀಡಬೇಕು. ಕೆಲವು ಕನ್ನಡ ಪತ್ರಿಕೆಗಳಿಗೂ ಇಂಗ್ಲಿಷ್‌'ನಲ್ಲಿಯೇ ಜಾಹೀರಾತು ನೀಡಲಾಗುತ್ತಿದೆ. ಈ ಪ್ರವೃತ್ತಿ ಮೊದಲು ಕೊನೆಗೊಳಿಸುವಂತೆ ಪ್ರಾಧಿಕಾರ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಸೂಚಿಸಿದರು.

ಕನ್ನಡ ಅನುಷ್ಠಾನ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಸೋಮವಾರ ಬಿಡಿಎ ಮತ್ತು ಬಿಬಿಎಂಪಿ ಕಚೇರಿಗೆ ಭೇಟಿ ಪರಿಶೀಲಿಸಿದರು. ಈ

ಸಂದರ್ಭದಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ, ವೃತ್ತ, ಉದ್ಯಾನ, ಬಡಾವಣೆಗಳಲ್ಲಿ ಸಮರ್ಪಕವಾಗಿ ಕನ್ನಡ ಅನುಷ್ಠಾನವಾಗುತ್ತಿಲ್ಲ. ಬಸವನಗುಡಿ ರಸ್ತೆಯನ್ನು ಬುಲ್ ಟೆಂಪಲ್ ರಸ್ತೆ ಎಂದು ನಾಮಫಲಕ ಹಾಕಲಾಗಿದೆ. ಬಸವನಗುಡಿಗೆ ತನ್ನದೇ ಆದ ಸಂಸ್ಕೃತಿ, ಚಾರಿತ್ರಿಕ ಮಹತ್ವವಿದೆ. ಈ ರೀತಿಯ ಹೆಸರು ಬದಲಿಸುವ ಮೂಲಕ ಸಂಸ್ಕೃತಿಗೆ ಅಪಚಾರ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಐದು ವರ್ಷಗಳಿಂದ ಕನ್ನಡ ಕಡೆಗಣನೆಯಾಗುತ್ತಿದೆ. ಜಾಹೀರಾತು, ರಸ್ತೆಗಳ ನಾಮಫಲಕ, ಅಂಗಡಿ- ಮುಂಗಟ್ಟುಗಳ ನಾಮಫಲಕ, ಪೌರ ಕಾರ್ಮಿಕರಿಗೆ ನೀಡುತ್ತಿರುವ ಗುರುತಿನ ಚೀಟಿಯಲ್ಲಿ ಇಂಗ್ಲಿಷ್ ಬಳಸುತ್ತಿದೆ. ಈ ನಡೆ ಹೀಗೆ ಮುಂದುವರಿದರೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದರು.

ಆಯುಕ್ತರ ಭರವಸೆ:

ಪ್ರಾಧಿಕಾರದ ಅಧ್ಯಕ್ಷರಿಗೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತ ಎನ್. ಮಂಜುನಾಥ ಪ್ರಸಾದ್, ಕನ್ನಡ ನಾಮಫಲಕ ಅಳವಡಿಕೆಗೆ ಕೂಡಲೇ ಆದೇಶ ಹೊರಡಿಸುತ್ತೇನೆ ಎಂದು ಭರವಸೆ ನೀಡಿದರು. ಆದರೆ, ರಸ್ತೆ, ವೃತ್ತಗಳಲ್ಲಿರುವ ನಾಮಫಲಕ ಬದಲಿಸುವ ಅಧಿಕಾರ ಪಾಲಿಕೆಗಿಲ್ಲ. ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ಸರ್ಕಾರಕ್ಕೆ ಕಳುಹಿಸಿಕೊಡಲಷ್ಟೇ  ಅಧಿಕಾರವಿದೆ. ಇದನ್ನು ಈ ತಿಂಗಳ ಕೌನ್ಸಿಲ್ ಸಭೆಯಲ್ಲಿ ಮಾಡುತ್ತೇವೆ ಎಂದು ಭರವಸೆ ನೀಡಿದರು. ಪರಿಶೀಲನೆ ವೇಳೆ ಬಿಡಿಎ ಆಯುಕ್ತ ರಾಕೇಶ್ ಸಿಂಗ್, ಎಂಜಿನಿಯರ್ ಸದಸ್ಯ ಪಿ.ಎನ್. ನಾಯಕ್, ಉಪ ಮೇಯರ್ ಆನಂದ್ ಪಾಲಿಕೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಶೇ.80 ಪೌರ ಕಾರ್ಮಿಕರು ತೆಲುಗು ಭಾಷಿಕರು, ಶೇ.10 ಕನ್ನಡಿಗರು!

ಪೌರ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಶೇ.80 ರಷ್ಟು ಕಾರ್ಮಿಕರು ತೆಲುಗು ಭಾಷಿಕರಿದ್ದಾರೆ. ಶೇ.೧೦ರಷ್ಟು ತಮಿಳು ಮತ್ತು ಉಳಿದ ಶೇ.೧೦ರಷ್ಟು ಕಾರ್ಮಿಕರು ಕನ್ನಡದವರಿದ್ದಾರೆ. ಹೊರಗುತ್ತಿಗೆ ನೀಡುತ್ತಿರುವುದರಿಂದ ಈ ರೀತಿಯ ಸಮಸ್ಯೆ ಎದುರಾಗಿದೆ ಎಂದು ಆಯುಕ್ತ ಎನ್. ಮಂಜುನಾಥ ಪ್ರಸಾದ್ ಮಾಹಿತಿ ನೀಡಿದರು. ‘ಸಿ’

ಮತ್ತು ‘ಡಿ’ ಗ್ರೂಪ್‌ನಲ್ಲಿ ಶೇ.100 ಕಾರ್ಮಿಕರು ಕನ್ನಡದವರೇ ಇರಬೇಕು ಎಂದು ಸರ್ಕಾರದ ಆದೇಶವಿದೆ. ಪಾಲಿಕೆಯಲ್ಲಿ ಹೇಗಿದೆ ಪರಿಸ್ಥಿತಿ ಎಂದು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ ಅವರು ಪ್ರಶ್ನಿಸಿದಾಗ ಆಯುಕ್ತರು ಈ ವಿವರ ನೀಡಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಂಪನಿ ಮಾರಾಟವಾದರೆ ನಿಯತ್ತಾಗಿ ದುಡಿದ ಉದ್ಯೋಗಿಗಳ ಪಾಡೇನು? ಮಾದರಿಯಾದ ಬಿಗ್ ಬಾಸ್
MNREGA Row: ಕಾಂಗ್ರೆಸ್‌ಗೆ ಯಾವುದೇ ನೀತಿ ಇಲ್ಲ, ಗದ್ದಲ ಕೇವಲ ರಾಜಕೀಯ: ಶಿವರಾಜ್ ಸಿಂಗ್ ಚೌಹಾಣ್ ಕಿಡಿ