
ಬೆಂಗಳೂರು (ಸೆ.27): ಕಾವೇರಿ ವಿಚಾರದಲ್ಲಿ ಸರ್ಕಾರದ ಎರಡು ದಾರಿಗಳಿವೆ. ಒಂದು ಸುಪ್ರೀಂ ಆದೇಶವನ್ನು ಪಾಲನೆ ಮಾಡುವುದು, ಇನ್ನೊಂದು ಮಾಡದಿರುವುದು ಎಂದು ಇಂದು ಸುಪ್ರೀಂ ತೀರ್ಪು ಹೊರಬಿದ್ದ ಬಳಿಕ ಬಿ.ವಿ ಆಚಾರ್ಯ ಹೇಳಿದ್ದಾರೆ.
ನನ್ನ ಅಭಿಪ್ರಾಯದ ಪ್ರಕಾರ ಸುಪ್ರೀಂ ಆದೇಶ ಪಾಲನೆ ಮಾಡಬಾರದು. ಒಂದು ವೇಳೆ ಮಾಡಿದರೆ ವಿಧಾನಸಭೆ ನಿರ್ಣಯವನ್ನು ಉಲ್ಲಂಘಿಸಿದಂತಾಗುತ್ತದೆ. ಕುಡಿಯುವ ನೀರಿಗಾಗಿ ಮಾತ್ರ ಕಾವೇರಿ ನೀರು ಎಂದು ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ತಮಿಳುನಾಡಿಗೆ ಕುಡಿಯುವುದಕ್ಕಾಗಿ ನೀರು ಬಿಡುಗೆಡ ಮಾಡಿದರೆ ಸಮಸ್ಯೆಯಿಲ್ಲ. ಆದರೆ ಅವರು ಕೃಷಿಗಾಗಿ ನೀರು ಕೇಳುತ್ತಿದ್ದಾರೆ. ಅವರಿಗೆ ಕೊಡುವಷ್ಟು ನೀರು ನಮ್ಮಲ್ಲಿ ಲಭ್ಯವಿಲ್ಲದ ಕಾರಣ ನಾವು ಸುಪ್ರೀಂ ಆದೇಶ ಪಾಲಿಸಬಾರದು ಎಂದು ಹಿರಿಯ ಅಡ್ವೋಕೇಟ್ ಜನರಲ್ ಬಿ ವಿ ಆಚಾರ್ಯರವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.