
ಉಡುಪಿ(ಅ.15): ಶ್ರೀ ಕೃಷ್ಣಮಠದ ಅಧಿಕೃತ ವೆಬ್'ಸೈಟ್ ಹ್ಯಾಕ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ಅಚಾನಕ್ಕಾಗಿ ಈ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಉಡುಪಿ ನಗರ ಪೊಲೀಸರಿಗೆ ಅರ್ಜಿ ಮೂಲಕ ಮಾಹಿತಿ ನೀಡಲಾಗಿದೆ. ಶ್ರೀ ಮಠದ ದೈನಂದಿನ ಚಟುವಟಿಕೆಗಳನ್ನು ಈ ಸೈಟ್'ನಲ್ಲಿ ಹಾಕಲಾಗುತ್ತದೆ. ಪೇಜಾವರ ಪರ್ಯಾಯ 2016. ಆರ್ಗ್ ವಿಳಾಸದ ಈ ವೆಬ್ ಸೈಟ್ ಸದ್ಯ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಎರಡು ದಿನಗಳ ಹಿಂದೆ ವೆಬ್ ಸೈಟ್ ಹ್ಯಾಕ್ಡ್ ಬೈ ಪಾಕ್ ಸೈಬರ್ ಪ್ರೊಫೆಶನಲ್ಸ್ ಎಂಬ ಸಂದೇಶ ಕಂಡು ಬಂದಿತ್ತು. ಸೈಬರ್ ಕ್ರೈಂ ಪೊಲೀಸರಿಗೆ ಮಾಹಿತಿ ರವಾನಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.