ಕ್ಷೇತ್ರ ಬದಲಿಸುತ್ತಾರಾ ಶ್ರೀರಾಮುಲು ?

Published : Mar 30, 2018, 08:22 AM ISTUpdated : Apr 11, 2018, 12:47 PM IST
ಕ್ಷೇತ್ರ ಬದಲಿಸುತ್ತಾರಾ ಶ್ರೀರಾಮುಲು ?

ಸಾರಾಂಶ

ಎಸ್ಟಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಳ್ಳಲು ಶ್ರೀರಾಮುಲು ಅವರನ್ನು ಮೊಳಕಾಲ್ಮುರಿನಿಂದ ಕಣಕ್ಕಿಳಿಸಲು ಪಕ್ಷ ಆಸಕ್ತಿ ತೋರಿದೆ ಎನ್ನಲಾಗುತ್ತಿದೆ

ಚಿತ್ರದುರ್ಗ(ಮಾ.30): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಬಳಿಕ ಭಾರಿ ರಾಜಕೀಯ ಬದಲಾವಣೆಗಳಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಮುಂದಾಗಿರುವ ಬಿಜೆಪಿಯು ಮೊಳಕಾಲ್ಮುರು ಕ್ಷೇತ್ರದಿಂದ ಸಂಸದ ಬಿ.ಶ್ರೀರಾಮುಲು ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂಬ ಮಾತುಗಳು ಜಿಲ್ಲೆಯಲ್ಲಿ ದಟ್ಟವಾಗಿ ಹರಡಿವೆ.

ಚಳ್ಳಕೆರೆ, ಮೊಳಕಾಲ್ಮೂರು, ಬಳ್ಳಾರಿ ಗ್ರಾಮಾಂತರ, ಕೂಡ್ಲಿಗಿ ವಿಧಾನಸಭೆ ಕ್ಷೇತ್ರಗಳು ಒಂದಕ್ಕೊಂದು ಹತ್ತಿರವಿದ್ದು ಎಲ್ಲವೂ ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಮೀಸಲಾಗಿವೆ. ಹೀಗಾಗಿ, ಎಸ್ಟಿ ಮೀಸಲು ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಳ್ಳಲು ಶ್ರೀರಾಮುಲು ಅವರನ್ನು ಮೊಳಕಾಲ್ಮುರಿನಿಂದ ಕಣಕ್ಕಿಳಿಸಲು ಪಕ್ಷ ಆಸಕ್ತಿ ತೋರಿದೆ ಎನ್ನಲಾಗುತ್ತಿದೆ. ಜೊತೆಗೆ ರಾಮುಲು ಅವರು ಮೊಳಕಾಲ್ಮುರಿನಿಂದ ಸ್ಪರ್ಧಿಸಿದರೆ, ಅಕ್ಕಪಕ್ಕದಲ್ಲೇ ಇರುವ ಉಳಿದ ನಾಲ್ಕು ಕ್ಷೇತ್ರಗಳನ್ನು ಗೆಲ್ಲಿಸಿಕೊಳ್ಳುವುದು ಸುಲಭವಾಗಲಿದೆ ಎಂಬ ಅಭಿಪ್ರಾಯವನ್ನು ಸಂಘ ಪರಿವಾರ ವ್ಯಕ್ತಪಡಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!