ಫೇಸ್ ಬುಕ್ ನಲ್ಲಿ ಗೌರಿ ಹಂತಕನ ಪರವಾಗಿ ಶ್ರೀ ರಾಮ ಸೇನೆ ಅಭಿಯಾನ

Published : Jun 15, 2018, 01:37 PM IST
ಫೇಸ್ ಬುಕ್ ನಲ್ಲಿ  ಗೌರಿ ಹಂತಕನ ಪರವಾಗಿ ಶ್ರೀ ರಾಮ ಸೇನೆ ಅಭಿಯಾನ

ಸಾರಾಂಶ

ಗೌರಿ‌ ಲಂಕೇಶ್ ಹತ್ಯೆ ಪ್ರಕರಣದಲ್ಲಿ  ಬಂಧಿತನಾಗಿರುವ ಆರೋಪಿ ಕುಟುಂಬಕ್ಕೆ ಸಹಾಯ ಮಾಡಲು ಶ್ರೀರಾಮ ಸೇನೆ ಸಂಚಾಲಕನೋರ್ವ  ಮನವಿ ಮಾಡಿದ ವಿಚಾರ ಬೆಳಕಿಗೆ ಬಂದಿದೆ.  

ವಿಜಯಪುರ :  ಗೌರಿ‌ ಲಂಕೇಶ್ ಹತ್ಯೆ ಪ್ರಕರಣದಲ್ಲಿ  ಬಂಧಿತನಾಗಿರುವ ಆರೋಪಿ ಕುಟುಂಬಕ್ಕೆ ಸಹಾಯ ಮಾಡಲು ಶ್ರೀರಾಮ ಸೇನೆ ಸಂಚಾಲಕನೋರ್ವ  ಮನವಿ ಮಾಡಿದ ವಿಚಾರ ಬೆಳಕಿಗೆ ಬಂದಿದೆ.  

ಬಂಧಿತ ಆರೋಪಿಗಳ ಪರ ಹಣ ಸಂಗ್ರಹಣೆಗೆ  ಶ್ರೀರಾಮ ಸೇನೆ ಮುಂದಾಗಿದ್ದು,  ಹಣ ಸಹಾಯ ಮಾಡುವಂತೆ ಜನರಲ್ಲಿ ಮನವಿ ಕೇಳಿದ್ದಾರೆ.  ವಿಜಯಪುರ ಶ್ರೀರಾ‌ಮ ಸೇನಾ ಜಿಲ್ಲಾಧ್ಯಕ್ಷ ರಾಕೇಶ್ ಮಠ ಎಂಬಾತ ಈ ರೀತಿಯ ಮನವಿ ಮಾಡಿ  ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾನೆ. 

ಧರ್ಮ ರಕ್ಷಣೆಗಾಗಿ ನಿಮ್ಮ ಪಾಲಿರಲಿ. ಪರಶುರಾಮ ಕುಟುಂಬ ಸಂಕಷ್ಟದಲ್ಲಿದ್ದು ಧನ ಸಹಾಯ ಮಾಡಿ ಎಂದು ಫೇಸ್ ಬುಕ್ ನಲ್ಲಿ ಪರಶುರಾಮ ಕುಟುಂಬಸ್ಥರ ಅಕೌಂಟ್ ನಂಬರ್ ಹಾಕಲಾಗಿದೆ. ಇಷ್ಟೇ ಅಲ್ಲದೇ  ಜೈ ಪರಶುರಾಮ್, ಜೈ ಮಂಗಲಪಾಂಡೆ, ಜೈ ನಾಥೂರಾಮ್ ಘೋಡ್ಸೆ ಎಂದು ಪ್ರಚಾರ ಮಾಡುತ್ತಿದ್ದಾರೆ.  ಎರಡು ದಿನಗಳಿಂದ ಪರಶುರಾಮ ಧರ್ಮ ರಕ್ಷಕ‌ ಎಂದು ಫೋಟೊ ವೈರಲ್ ಮಾಡಿದ್ದರು. ಇದೀಗ ಇಂದು‌ ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಿದ್ದಾರೆ 

ಈ ಹಿಂದೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಯುವಕರು ಸಂಘಟನೆಗೆ ಸೇರಿದವರಲ್ಲ ಎಂದು ಪ್ರಮೋದ್ ಮುತಾಲಿಕ್‌ ಹೇಳಿದ್ದರು. ಆದರೆ ಇದೀಗ ಅವರ ಹಿಂಬಾಲಕರು ಪರಶುರಾಮನ ಪರವಾಗಿ ಅಭಿಯಾನ ಆರಂಭಿಸಿದ್ದಾರೆ. 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2025ರ ಪ್ರವಾಸೋದ್ಯಮದಲ್ಲಿ ಬೆಂಗಳೂರು ದರ್ಬಾರ್: ಬಿಸಿನೆಸ್, ವಿರಾಮಕ್ಕೆ ಪ್ರವಾಸಿಗರ ಮೊದಲ ಆಯ್ಕೆ ಸಿಲಿಕಾನ್ ಸಿಟಿ!
ತಿರುಪತಿ ತಿಮ್ಮಪ್ಪನಿಗೆ 1.2 ಕೋಟಿ ರೂಪಾಯಿ ಮೌಲ್ಯದ ಬ್ಲೇಡ್‌ ದಾನ ಮಾಡಿದ ಹೈದರಾಬಾದ್‌ ಉದ್ಯಮಿ