ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್​ಐ ಆತ್ಮಹತ್ಯೆ

Published : Nov 26, 2016, 04:22 PM ISTUpdated : Apr 11, 2018, 12:41 PM IST
ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್​ಐ ಆತ್ಮಹತ್ಯೆ

ಸಾರಾಂಶ

ನರೇಂದ್ರ ಮೋದಿಯವರು ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿ ಭಾಷಣ ಮಾಡಲಿರುವ ಎಸ್’ವಿಪಿ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಿಂದ 2 ಕಿಮೀ ದೂರದಲ್ಲಿರುವ ಪಿವಿಎನ್ಆರ್ ಎಕ್ಸ್ ಪ್ರೆಸ್ ವೇ ಬಳಿಯ ಮೈಲಾರದೆವಪಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಎಸ್ಐ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೈದರಾಬಾದ್ (ನ.26): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೈದರಾಬಾದ್ ಭೇಟಿ ಹಿನ್ನೆಲೆ ಭದ್ರತೆಗೆ ನಿಯೋಜನೆಗೊಂಡಿದ್ದ ಸಬ್ ಇನ್ಸ್ ಪೆಕ್ಟಕ್ ಒಬ್ಬರು ತಮ್ಮ ಸೇವಾ ರಿವಾಲ್ವರ್ ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ನರೇಂದ್ರ ಮೋದಿಯವರು ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿ ಭಾಷಣ ಮಾಡಲಿರುವ ಎಸ್’ವಿಪಿ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಿಂದ 2 ಕಿಮೀ ದೂರದಲ್ಲಿರುವ ಪಿವಿಎನ್ಆರ್ ಎಕ್ಸ್ ಪ್ರೆಸ್ ವೇ ಬಳಿಯ ಮೈಲಾರದೆವಪಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಎಸ್ಐ ಶ್ರೀಧರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶ್ರೀಧರ್ ತಮ್ಮ ಎದೆಗೆ ಸೇವಾ ರಿವಾಲ್ವರ್’ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸಿಫಾಬಾದ್ ಜಿಲ್ಲೆಯ ಚಿಂಟಾಲಮನೆಪಲ್ಲಿ ಪೊಲೀಸ್ ಠಾಣೆಯಲ್ಲಿ ಎಸ್ಐ ಆಗಿದ್ದ ಶ್ರೀಧರ್ ಅವರನ್ನು ಹೈದರಾಬಾದ್ ಗೆ ನವೆಂಬರ್ 23 ರಂದು ಕರೆಯಿಸಿಕೊಳ್ಳಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ