
ಆನೇಕಲ್ : ತಮಿಳುನಾಡಿನಲ್ಲಿ ಬೈಕ್ ಸವಾರನ ಮೇಲೆ ಪೊಲೀಸ್ ಅಧಿಕಾರಿ ದರ್ಪ ತೋರಿದ್ದು, ಇದಕ್ಕೆ ಗರ್ಭಿಣಿ ಬಲಿಯಾದ ಅಮಾನವೀಯ ಘಟನೆ ನಡೆದಿದೆ.
ಇಲ್ಲಿನ ತಿರುಚಿಯಲ್ಲಿ ನಿನ್ನೆ ರಾತ್ರಿ ಬೈಕ್ ಸವಾರ ರಾಜು ಪತ್ನಿ ಉಷಾರೊಂದಿಗೆ ತೆರಳುತ್ತಿದ್ದರು. ಈ ವೇಳೆ ಬೈಕ್ ಅಡ್ಡಗಟ್ಟಿದ ಎಸ್ಐ ಕಾಮರಾಜು ಹೆಲ್ಮೆಟ್ ಧರಿಸಿಲ್ಲ ಎಂದು 100 ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.
ಈ ವೇಳೆ ಬೈಕ್ ಸವಾರ ಹಾಗೂ ಎಸ್ಐ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಬೈಕ್ ಸವಾರ ಹಣ ನೀಡದೇ ತನ್ನ ಪತ್ನಿಯೊಂದಿಗೆ ಮುಂದೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಎಸ್ಐ ಬಂದು ಚಲಿಸುತ್ತಿದ್ದ ಬೈಕ್’ಗೆ ಒದ್ದಿದ್ದಾರೆ.ಇದರಿಂದ ಬೈಕ್’ನಲ್ಲಿದ್ದ ಉಷಾ ಹಾಗೂ ರಾಜು ಕೆಳಕ್ಕೆ ಬಿದ್ದಿದ್ದಾರೆ.
ಗರ್ಭಿಣಿಯಾಗಿದ್ದ ಉಷಾ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ತಿರುಚಿ ಎಸ್ಐ ಕಾಮಾರಾಜು ಮೇಲೆ ಎಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.