ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು

Published : May 11, 2017, 12:57 PM ISTUpdated : Apr 11, 2018, 12:50 PM IST
ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು

ಸಾರಾಂಶ

ಶ್ರೀಗಳು ಎರಡು ದಿನಗಳ ಹಿಂದೆ ಕಾರ್ಯನಿಮಿತ್ತ ಮಾಗಡಿಗೆ ತೆರಳಿದ್ದರು. ಪ್ರಯಾಣದಿಂದ ಸುಸ್ತಾಗಿದ್ದಾರೆ.

ತುಮಕೂರು(ಮೇ.11): ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ನಿನ್ನೆ ರಾತ್ರಿಯಿಂದ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದೆ.

ಬಿಸಿಲ ಧಗೆಯಿಂದ ಈ ರೀತಿ ಉಂಟಾಗಿದ್ದು,ವೈದ್ಯರಿಂದ ಶ್ರೀಗಳ ತಪಾಸಣೆಗೊಳಪಡಿಸಲಾಗಿದೆ.ಶ್ರೀಗಳು ಎರಡು ದಿನಗಳ ಹಿಂದೆ ಕಾರ್ಯನಿಮಿತ್ತ ಮಾಗಡಿಗೆ ತೆರಳಿದ್ದರು. ಪ್ರಯಾಣದಿಂದ ಸುಸ್ತಾಗಿದ್ದಾರೆ. ಶ್ರೀಮಠದ ಹಳೇ ಮಠದಲ್ಲೇ ಸ್ವಾಮೀಜಿಗಳ ವಿಶ್ರಾಂತಿ ಹಾಗೂ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆ ವೈದ್ಯರು ಬರುವ ಸಾಧ್ಯತೆಯಿದೆ.

ಸ್ವಾಮೀಜಿಗಳಿಗೆ ಅನಾರೋಗ್ಯ ಉಂಟಾಗಿರುವ ಹಿನ್ನಲೆಯಲ್ಲಿ ಭಕ್ತರಿಗೆ ಸ್ವಾಮೀಜಿ ದರ್ಶನಕ್ಕೆ  ನಿರ್ಬಂಧ ವಿಧಿಸಲಾಗಿದೆ. ಮಠದ ಆವರಣ ಪೊಲೀಸರ ನಿಯೋಜಿಸಲಾಗಿದ್ದು, ಮಠಕ್ಕೆ ಪ್ರಭಾರ ಎಸ್ಪಿ ಲೋಕೇಶ್ ಕುಮಾರ್ ಭೇಟಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌