ಶಸ್ತ್ರಚಿಕಿತ್ಸೆಗೆ ಸಿದ್ದಗಂಗಾ ಶ್ರೀಗಳ ಒಪ್ಪಿಗೆ: ಇಂದು ಸಂಜೆ ಸಿಎಂ ಭೇಟಿ

Published : May 12, 2017, 12:02 PM ISTUpdated : Apr 11, 2018, 12:37 PM IST
ಶಸ್ತ್ರಚಿಕಿತ್ಸೆಗೆ ಸಿದ್ದಗಂಗಾ ಶ್ರೀಗಳ ಒಪ್ಪಿಗೆ: ಇಂದು ಸಂಜೆ ಸಿಎಂ ಭೇಟಿ

ಸಾರಾಂಶ

. ಮಠದಲ್ಲಿಯೇ ಶ್ರೀಗಳಿಗೆ 5 ಜನ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು. ಶ್ರೀಗಳ ಶ್ವಾಸಕೋಶ, ಜಠರ ಹಾಗೂ ಮೂತ್ರದಲ್ಲಿ ಸೋಂಕು ಇರುವ ಶಂಕೆಯಿದ್ದು ರಕ್ತದ ಮಾದರಿಯನ್ನು ನಿನ್ನೆಯೇ ಬಿಜಿಎಸ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ನಂತರವಷ್ಟೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.

ಬೆಂಗಳೂರು(ಮೇ.12): ಅನಾರೋಗ್ಯದ ಕಾರಣದಿಂದ ನಗರದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಡೆದಾಡುವ ದೇವರು ಎಂದೇ ಲೋಕ ಪ್ರಸಿದ್ಧರಾದ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಶಸ್ತ್ರಚಿಕಿತ್ಸೆಗೆ ಒಪ್ಪಿಗೆ ಸೂಚಿಸಿದ್ದಾರೆ.

ಆಸ್ಪತ್ರೆಯಲ್ಲೇ ಶ್ರೀಗಳ ಇಷ್ಟಲಿಂಗ ಪೂಜೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಕೆಲವು ದಿನಗಳಿಂದ ಜ್ವರ ಹಾಗೂ ನಿಶಕ್ತಿ ಕಾಣಿಸಿಕೊಂಡ ಕಾರಣ ಶ್ರೀಗಳ ಆರೋಗ್ಯದಲ್ಲಿ ಕೊಂಚಮಟ್ಟಿಗೆ ಏರುಪೇರು ಉಂಟಾಗಿತ್ತು. ಮಠದಲ್ಲಿಯೇ ಶ್ರೀಗಳಿಗೆ 5 ಜನ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು. ಶ್ರೀಗಳ ಶ್ವಾಸಕೋಶ, ಜಠರ ಹಾಗೂ ಮೂತ್ರದಲ್ಲಿ ಸೋಂಕು ಇರುವ ಶಂಕೆಯಿದ್ದು ರಕ್ತದ ಮಾದರಿಯನ್ನು ನಿನ್ನೆಯೇ ಬಿಜಿಎಸ್ ಆಸ್ಪತ್ರೆಗೆ ಕಳುಹಿಸಲಾಗಿತ್ತು. ನಂತರವಷ್ಟೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.

ಸ್ವಾಮೀಜಿ ಅವರನ್ನು ಎಂಡೋಸ್ಕೋಪೊ ಪರೀಕ್ಷೆಗಾಗಿ ಆಪರೇಷನ್ ಥಿಯೇಟರ್​ಗೆ ಶಿಫ್ಟ್ ಮಾಡಲಾಗಿದ್ದು,​ ಗ್ಯಾಸ್ಟ್ರೋ ಎಂಟಾಲಾಜಿಸ್ಟ್ ಡಾ.ಆದರ್ಶ್, ಡಾ.ರವೀಂದ್ರ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಬಿಜಿಎಸ್​ ಆಸ್ಪತ್ರೆ ಸುತ್ತ ಭಾರೀ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಶ್ರೀಗಳ ಆರೋಗ್ಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿಯಲ್ಲಿ ವಿಚಾರಿಸಿದ್ದು, ಇಂದು ಸಂಜೆ 6 ಗಂಟೆ ಸುಮಾರಿಗೆ ಭೇಟಿ ನೀಡುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌