
ತುಮಕೂರು (ಜೂ. 21): ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ಲಡ್ ಚೆಕ್ ಅಪ್ ಸೇರಿದಂತೆ ರೆಗ್ಯೂಲರ್ ಚೆಕ್ ಅಪ್ ಮಾಡಲಾಗುವುದು. ಬ್ಲಡ್ ರಿಪೋರ್ಟ್ ಬಂದ ಬಳಿಕ ಮುಂದಿನ ಚಿಕಿತ್ಸೆ ನೀಡಲಾಗಿದೆ. ಬಿಜಿಎಸ್ ಆಸ್ಪತ್ರೆಯ ಹಿರಿಯ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡಲಿದೆ ಎಂದು ಡಾ. ರವೀಂದ್ರ ಹೇಳಿದ್ದಾರೆ.
ಶ್ರೀಗಳು ಆಸ್ಪತ್ರೆಗೆ ಬರಲು ಒಪ್ಪಲಿಲ್ಲ. ಅವರ ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಜನರಲ್ ಚೆಕ್ ಅಪ್ ನ ವರದಿ ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಜನವರಿಯಲ್ಲಿ ಮೂರು ಸ್ಟಂಟ್ ಅಳವಡಿಕೆ ಮಾಡಲಾಗಿತ್ತು. ಒಟ್ಟು ಅವರ ದೇಹದಲ್ಲಿ 8 ಸ್ಟಂಟ್ ಗಳಿವೆ. ಒಂದು ಸ್ಟಂಟ್'ನ ಅವಧಿ ಕೇವಲ ಆರು ತಿಂಗಳು ಹೀಗಾಗಿ ಸ್ಟಂಟ್ ನ ಕಾರ್ಯವೈಖರಿ ಬಗ್ಗೆ ತಪಾಸಣೆ ಮಾಡಲಾಗುವುದು. ಆ ಬಳಿಕ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಡಾ. ರವೀಂದ್ರ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.