
ತುಮಕೂರು: ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು ಉಸಿರಾಟದ ತೊಂದರೆ ಅನುಭವಿಸುತ್ತಿದ್ದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಇದೀಗ ಸಿದ್ಧಗಂಗಾ ಆಸ್ಪತ್ರೆ ವೈದ್ಯರು ಪ್ಲಾಸ್ಮಾ ಅಲ್ಟ್ರಾ ಫಿಲ್ಟ್ರೇಷನ್ ಚಿಕಿತ್ಸೆ ಮೂಲಕ ರಕ್ತ ಶುದ್ಧೀಕರಣ ಮಾಡುತ್ತಿದ್ದಾರೆ.
ಸ್ವಾಮೀಜಿ ಅವರ ರಕ್ತದಲ್ಲಿ ಎಂಡೋ ಟಾಕ್ಸಿನ್ ಮತ್ತು ಬ್ಯಾಕ್ಟೀ ರಿಯಾಗಳಿದ್ದು, ಅದನ್ನು ಶುದ್ಧೀಕರಿಸಿ ರಕ್ತ ಚಲನೆಗೆ ಸಹ ಕಾರಿಯಾಗುವಂತಹ ನೂತನ ಚಿಕಿತ್ಸಾ ವಿಧಾನ ಕೈಗೊಳ್ಳಲಾಗಿದೆ.
ಶ್ರೀಗಳ ಆರೋಗ್ಯ ಜವಾಬ್ದಾರಿ ಹೊತ್ತ ಮೊಹ್ಮದ್ ರೇಲಾ ಯಾರು?
ಇದರಿಂದ ಸ್ವಾಮೀಜಿ ಭಾನುವಾರ ರಾತ್ರಿಯಿಂದ ಸಾಕಷ್ಟು ಚೇತರಿಕೆ ಕಂಡಿದ್ದಾರೆ ಎಂದು ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ತಿಳಿಸಿದ್ದಾರೆ. ಸ್ವಾಮೀಜಿ ಕಣ್ತೆರೆದು ನೋಡಿ ನಮ್ಮೊಂದಿಗೆ ಮಾತನಾಡುತ್ತಿದ್ದಾರೆ. ಸೋಮವಾರ ಬೆಳಗ್ಗೆ ರಕ್ತಪರೀಕ್ಷೆ ವರದಿಯಲ್ಲಿ ಶ್ವಾಸ ಕೋಶದಲ್ಲಿನ ಸೋಂಕು ಕಡಿಮೆಯಾಗಿರು ವುದು ಮತ್ತು ದೇಹದಲ್ಲಿ ಪ್ರೊಟೀನ್ ಅಂಶ ಜಾಸ್ತಿ ಆಗಿರುವುದು ಸ್ಪಷ್ಟವಾಗಿದೆ. ಪ್ರೊಟೀನ್ ಅಂಶ ಪ್ರತಿ ಲೀಟರ್ಗೆ 3.4 ಮಿಲಿ ಗ್ರಾಂಗೆ ಏರಿಕೆಯಾಗಿದೆ.
ಈ ನಡುವೆ ಶ್ರೀಗಳಿಗೆ ವೆಂಟಿಲೇಟರ್ ಮೂಲಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿ ಎಂದು ಡಾ.ಪರಮೇಶ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.