ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರದಲ್ಲಿಯೂ ವಿಕೃತರ ಕಿತಾಪತಿ

Published : Dec 07, 2018, 10:41 PM ISTUpdated : Dec 07, 2018, 10:49 PM IST
ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರದಲ್ಲಿಯೂ ವಿಕೃತರ ಕಿತಾಪತಿ

ಸಾರಾಂಶ

ವಿಕೃತ ಮನಸ್ಸಿನವರು ಸಾವಲ್ಲೂ ಸಂಭ್ರಮಿಸುವುದನ್ನು ನೋಡಿದ್ದೇವೆ. ಕೇಂದ್ರ ಸಚಿವ ಅನಂತ್‌ ಕುಮಾರ್‌ ಮತ್ತು ರೆಬಲ್ ಸ್ಟಾರ್ ಅಂಬರೀಶ್ ನಿಧನದ ವೇಳೆಯೂ ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ಮನಸಿಗೆ ಬಂದ ಹಾಗೆ ಬರೆದುಕೊಂಡಿದ್ದರು.

ಬೆಂಗಳೂರು[ಡಿ.07] ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಆರೈಕೆಗಾಗಿ ಚೆನ್ನೈಗೆ ಕರೆದುಕೊಂಡು ಹೋಗಲಾಗಿದೆ. ಅವರ ಆರೋಗ್ಯಕ್ಕೆ ಸಂಬಂಧಿಸಿದ ವಿವರಗಳನ್ನು ಮಾಧ್ಯಮಗಳು ಬಿತ್ತರಿಸುತ್ತಿವೆ. ಭಕ್ತರು ಆತಂಕಗೊಳ್ಳುವುದು ಬೇಕಿಲ್ಲ ಎಂದು ಪದೆ ಪದೆ ಹೇಳಲಾಗುತ್ತಿದೆ.

ಆದರೆ ಸೋಶಿಯಲ್ ಮೀಡಿಯಾದಲ್ಲಿ ವಿಕೃತ ಮನಸ್ಸಿನವರು ಶ್ರೀಗಳ ಸಾವಿನ ಬಗ್ಗೆಯೇ ಬರೆದಿದ್ದಾರೆ. ನಾಗರಿಕರಿಂದ ವಿರೋಧ ಬಂದ ನಂತರ ಪೋಸ್ಟ್ ಡಿಲೀಟ್ ಮಾಡಲಾಗಿದೆ. ಯಾವ ಕಾರಣಕ್ಕೆ ಇಂಥ ಪೋಸ್ಟ್ ಹಾಕಿದ್ದೀರಾ? ನೀವು 420 ಎಂಬುದಾಗಿ ಕಮೆಂಟ್ ಮಾಡಲಾಗಿತ್ತು. ಪೋಸ್ಟ್ ಹಾಕಿದ್ದವರು ನಂತರ ಡಿಲೀಟ್ ಮಾಡಿದ್ದಾರೆ.

ನಡೆದಾಡುವ ದೇವರು, ಅಕ್ಷರ ದಾಸೋಹಿ ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳು ಕಳೆದ ಮೂರ್ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ  ಚೆನ್ನೈಗೆ ಕರೆದೊಯ್ಯಲಾಗಿದೆ. ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದ್ದು, ನುರಿತ ಸರ್ಜನ್ ಡಾ.ಮಹಮದ್ ರೇಲಾ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
'ಮಹಿಳೆಯರು ಇರೋದು ಗಂಡನ ಜೊತೆ ಮಲಗೋಕೆ ಮಾತ್ರ..' ವಿಜಯೋತ್ಸವ ಭಾಷಣದಲ್ಲಿ ಸಿಪಿಎಂ ನಾಯಕನ ವಿವಾದಿತ ಮಾತು