ಅಡಕತ್ತರಿಯಲ್ಲಿ ರೈತರ ಸಾಲಮನ್ನಾ ವಿಚಾರ

Published : Jun 14, 2018, 08:26 PM IST
ಅಡಕತ್ತರಿಯಲ್ಲಿ ರೈತರ ಸಾಲಮನ್ನಾ ವಿಚಾರ

ಸಾರಾಂಶ

ಸಮನ್ವಯ ಸಮಿತಿಯಲ್ಲಿ ಜೆಡಿಎಸ್'ನಿಂದ ಇಬ್ಬರು, ಕಾಂಗ್ರೆಸ್'ನಿಂದ ಮೂವರು ಸದಸ್ಯರು ಯೋಜನೆ ಜಾರಿಗೆ ಆತುರ ಬೇಡ ಎನ್ನುತ್ತಿರುವ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ

ಬೆಂಗಳೂರು[ಜೂ.14]: ರೈತರ ಸಾಲ ಮನ್ನಾ ವಿಚಾರ ಮತ್ತೆ ಮುಂದೂಡಿಕೆಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಮೈತ್ರಿ ಸರ್ಕಾರ ಸಮನ್ವಯ ಸಮಿತಿಯನ್ನು ರಚಿಸಿದ್ದು ಜೆಡಿಎಸ್ ಪ್ರಣಾಳಿಕೆಯಲ್ಲಿರುವ  ರೈತರ ಸಾಲಮನ್ನಾಗೆ ಸಮಿತಿ ಮನ್ನಣೆ ನೀಡಿದರೆ ಮಾತ್ರ ರೈತರ  ಸಾಲಮನ್ನಾ ಮಾಡಲು ಸರ್ಕಾರ ಮುಂದಾಗಬೇಕಾಗುತ್ತದೆ.

ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 15 ದಿನಗಳಲ್ಲಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರು ಸಾಲಮನ್ನಾಗೆ ಆತುರ ಬೇಡ ಎಂದು ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿದ್ದಾರೆ. 

ಸಮನ್ವಯ ಸಮಿತಿಯು ಎರಡೂ ಪಕ್ಷಗಳ ಆಶ್ವಾಸನೆಯ ಪಟ್ಟಿಯನ್ನು ಸಿದ್ದಗೊಳಿಸಲಿದ್ದು ಸುಮಾರ 53 ಸಾವಿರ ಕೋಟಿ ಅಗತ್ಯವಿರುವ ಸಾಲಮನ್ನಾ ಯೋಜನೆಯನ್ನು ಸೇರಿಸಿದ್ದರೆ ಮನ್ನಾ ವಿಚಾರ ಕಾರ್ಯಗತವಾಗುವುದಿಲ್ಲ.  ಸಮಿತಿಯಲ್ಲಿ ಕಾಂಗ್ರೆಸ್'ನಿಂದ ಮೂವರು ಹಾಗೂ ಜೆಡಿಎಸ್'ನಿಂದ ಇಬ್ಬರು ಸದಸ್ಯರಿರುತ್ತಾರೆ. ಇವರು ಮೈತ್ರಿ ಸರ್ಕಾರದ ಪಟ್ಟಿಯನ್ನು ತಯಾರಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೈದ್ಯಾಧಿಕಾರಿಯಿಂದ ನರ್ಸ್‌ಗೆ ನಿರಂತರ ಕಿರುಕುಳ, ಆಸ್ಪತ್ರೆಯಲ್ಲೇ 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆತ್ಮ*ಹತ್ಯೆ ಯತ್ನ!
2 ಮಕ್ಕಳಾದ ನಂತರವು ಮುಸ್ಲಿಂ ಸೊಸೆಯ ಒಪ್ಪಿಕೊಳ್ಳದ ಪೋಷಕರು: ವಿಚ್ಛೇದನ ನೀಡಲು ಮುಂದಾದ ಮಗನಿಂದ ಆಯ್ತು ಘೋರ ಅಪರಾಧ