
ಬೆಂಗಳೂರು (ಜೂ. 02): ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ವಿಚಾರವಾಗಿ ಶಿವಕುಮಾರ್’ಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೆಲ ಸಲಹೆ ನೀಡಿದ್ದಾರೆ.
ಸದ್ಯಕ್ಕೆ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಬೇಡ. ಒಂದಷ್ಟು ದಿನ ಕಾಯೋದು ಸೂಕ್ತ. ಸಚಿವ ಸಂಪುಟದಲ್ಲಿ ಮಂತ್ರಿಯಾಗೋದು ಉತ್ತಮ. ಸಂಪುಟದಲ್ಲಿ ನಿಮ್ಮಂತವರ ಅಗತ್ಯ ಪಕ್ಷಕ್ಕಿದೆ. ಸಂಪುಟದಿಂದ ಹೊರಗಿದ್ದು ಅಧ್ಯಕ್ಷ ಗಿರಿ ಕೇಳೋದು ಬೇಡ. ಹೈಕಮಾಂಡ್ ನಿರ್ಧಾರಗಳಿಗೆ ಬದ್ಧರಾಗಿ ಕೆಲಸ ಮಾಡಿ ಎಂದು ಸಿದ್ದರಾಮಯ್ಯ ಡಿಕೆಶಿಗೆ ಸಲಹೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ಜವಾಬ್ದಾರಿ ತೆಗೆದುಕೊಂಡರೆ ಸೂಕ್ತ. ಈಗ ಸಂಪುಟದಲ್ಲಿ ಸಚಿವರಾಗಿ ಮುಂದುವರೆಯಿರಿ. ರಾಜಕೀಯದಲ್ಲಿ ಉತ್ತಮ ಭವಿಷ್ಯ ನಿಮಗಿದ ಎಂದಿದ್ದಾರೆ.
ಡಿ.ಕೆ.ಶಿ ಹಾಗೂ ಡಿ.ಕೆ ಸುರೇಶ್ ಮೇಲೆ ಸಿ.ಬಿ.ಐ ನಿಂದ ಸರ್ಚ್ ವಾರೆಂಟ್ ಜಾರಿ ವಿಚಾರವಾಗಿ ಆರ್ಥಿಕ ಅಪರಾಧ ಪ್ರಕರಣದ ಕುರಿತಂತೆ ಹೆಚ್ಚಿನ ಗಮನ ವಹಿಸುವುದು ಸೂಕ್ತ.ಸಂಪುಟದಲ್ಲಿ ಸಚಿವರಾಗಿದ್ದುಕೊಂಡು ಕಾನೂನು ಹೋರಾಟ ಮುಂದುವರೆಸಿ ಎಂದು ಮಾಜಿ ಪವರ್ ಮಿನಿಸ್ಟರ್ ಗೆ ಮಾಜಿ ಸಿಎಂ ಟಿಪ್ಸ್ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.