
ಮೈಸೂರು(ಫೆ.17): ಸಾಂಸ್ಕೃತಿಕ ನಗರಿಯಲ್ಲಿ ಫೆ.19ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಬೆಂಗಳೂರು-ಮೈಸೂರು ಡಬ್ಲಿಂಗ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಹ್ವಾನಿಸಲಾಗಿದೆ.
ಭಾನುವಾರ ರಾತ್ರಿ ಸಿಎಂ ಅವರು ಮೈಸೂರಿಗೆ ಆಗಮಿಸಿ ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದಾರೆ. ಫೆ.19ರ ಮಧ್ಯಾಹ್ನ ಬೆಂಗಳೂರು - ಮೈಸೂರು ವಿಧ್ಯುದೀಕರಣ ಕಾಮಗಾರಿಯಲ್ಲಿ ಕೂಡ ಭಾಗಿಯಾಗಲಿದ್ದಾರೆ ಎಂದು ಸಿಎಂ ಕಚೇರಿಯಿಂದ ಹೊರಡಿಸಿದ ಪ್ರವಾಸ ಕಾರ್ಯಕ್ರಮದಲ್ಲಿ ಸಿಎಂ ಕಚೇರಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸಂಚಾರ ಮಾರ್ಗ ಬದಲಾವಣೆ
ಮೈಸೂರಿಗೆ ಮೋದಿ ಆಗಮನದ ಹಿನ್ನಲೆಯಲ್ಲಿ ಫೆ.18. ರ ರಾತ್ರಿ 10 ಗಂಟೆಯಿಂದ 19ರ ಸಂಜೆ ವರೆಗೆ ನಗರದ ಹಲವು ಮಾರ್ಗಗಳಲ್ಲಿ ಸಾರ್ವಜನಿಕ ಸಂಚಾರ ಮಾರ್ಗವನ್ನು ಪೊಲೀಸರು ಬದಲಾಯಿಸಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಿಂದ ರೇಸ್ ಕೋರ್ಸ್ ರಸ್ತೆವರೆಗೆ 200 ಮೀಟರ್ ಅಂತರದಲ್ಲಿ ಎಲ್ಲಾ ಮಾದರಿ ವಾಹನಗಳ ನಿರ್ಬಂಧಿಸಲಾಗಿದೆ. ಫೆ 18. ರಾತ್ರಿ 8:30 ರಿಂದ ಮಧ್ಯರಾತ್ರಿವರೆಗೆ ಹಾಗೂ 19 ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಲಲಿತ ಮಹಲ್ ಹೆಲಿಪ್ಯಾಡ್'ವರೆಗೆ 200 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳಿಗೆ ನಿರ್ಬಂಧಿಸಲಾಗಿದೆ.
ಫೆ.18 ರ ರಾತ್ರಿ 8 ಗಂಟೆಯಿಂದ 19 ಮಧ್ಯಾಹ್ನ 1 ಗಂಟೆವರೆಗೆ ಲಲಿತ ಮಹಲ್ ರಸ್ತೆ, ರೈಸ್ ಕೋರ್ಸ್, ರ್ಯಾಡಿಸನ್ ಬ್ಲೂ ವರೆಗೆ ಎಲ್ಲಾ ರೀತಿಯ ಪ್ರಾಣಿಗಳಿಗೂ ತಡೆ ನೀಡಲಾಗಿದೆ.
ಫೆ 19 ರಂದು ಮಧ್ಯಾಹ್ನ 12 ರಿಂದ ಸಂಜೆ 6 ಗಂಟೆವರೆಗೆ ಮೆಟ್ರಪೋಲ್, ರೈಲ್ವೆಗೇಟ್, ನಂಜನಗೂಡು ರಸ್ತೆ,ಮಂಡಕಳ್ಳಿ ವಿಮಾನ ನಿಲ್ದಾಣದ ವರೆಗೆ 200 ಮೀಟರ್ ಅಂತರದಲ್ಲಿ ವಾಹನ ನಿಲುಗಡೆ ನಿರ್ಬಂಧ. ರೈಲ್ವೆ ನಿಲ್ದಾಣದಲ್ಲಿ ಮೋದಿ ಕಾರ್ಯಕ್ರಮ ಮುಗಿಯುವವರೆಗೆ ಪಾರ್ಕಿಂಗ್ ಇರುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.