
ಬೆಂಗಳೂರು(ಜೂನ್ 08): ಸಿಎಂ ಸಿದ್ದರಾಮಯ್ಯನವರ ಸಂಪುಟದಿಂದ ಮೂವರನ್ನು ಕೈಬಿಡುವ ಸಾಧ್ಯತೆ ಇದೆ. ಸಂಪುಟ ವಿಸ್ತರಣೆ ಬದಲು ಸರಕಾರವು ಸಂಪುಟ ಪುನಾರಚನೆಗೆ ನಿರ್ಧಿರಿಸಿದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಸಮರ್ಪಕವಾಗಿ ಕಾರ್ಯನಿರ್ವಹಿಸದ ಮೂವರು ಸಚಿವರಿಗೆ ಸಂಪುಟದಿಂದ ಕೊಕ್ ನೀಡಿ ಅವರ ಜಾಗಕ್ಕೆ ಹೊಸಬರನ್ನು ಕೂರಿಸುವ ಚಿಂತನೆ ನಡೆದಿದೆ. ಇನ್ನು ಕೆಲ ಸಚಿವರ ಸ್ಥಾನಪಲ್ಲಟವಾಗುವ ಸಾಧ್ಯತೆಯೂ ಇದೆ. ಮೂಲಗಳ ಪ್ರಕಾರ, ಜಿ.ಪರಮೇಶ್ವರ್ ಅವರಿಂದ ತೆರವಾಗುವ ಗೃಹ ಖಾತೆಯ ಹೊಣೆಯನ್ನು ಈಗಿನ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ವಹಿಸುವ ಸಾಧ್ಯತೆ ಇದೆ. ವಿಧಾನಪರಿಷತ್ ಸದಸ್ಯ ಹಾಗೂ ಕುರುಬ ಸಮುದಾಯಕ್ಕೆ ಸೇರಿದ ಎಚ್.ಎಂ.ರೇವಣ್ಣ ಅವರಿಗೆ ಸಂಪುಟದಲ್ಲಿ ಈ ಬಾರಿ ಅವಕಾಶ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಸಾರಿಗೆ ಖಾತೆಯ ಜವಾಬ್ದಾರಿ ರೇವಣ್ಣನವರ ಹೆಗಲಿಗೇರಬಹುದು.
ಸಂಪುಟದಿಂದ ಹೊರಹೋಗಲಿರುವ ಮೂವರು ಸಚಿವರು ಯಾರು ಎಂಬುದರ ಸುಳಿವು ಇನ್ನೂ ಸಿಕ್ಕಿಲ್ಲ. ಇನ್ನು, ಸಂಪುಟಕ್ಕೆ ಸೇರ್ಪಡೆಯಾಗುವ ಮೂವರು ಹೊಸ ಮುಖಗಳಲ್ಲಿ ಹಿರಿಯ ನಾಯಕ ಎಚ್.ಎಂ.ರೇವಣ್ಣನವರ ಹೆಸರು ಕೇಳಿಬರುತ್ತಿದೆ. ಇನ್ನಿಬ್ಬರು ಯಾರು ಎಂಬುದು ಗೊತ್ತಾಗಬೇಕಿದೆ. ಅಧಿವೇಶನದ ಬಳಿಕ ಮುಖ್ಯಮಂತ್ರಿಗಳು ಸಂಪುಟ ಪುನಾರಚನೆಯ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
(ಫೋಟೋ: ರಾಮಲಿಂಗಾ ರೆಡ್ಡಿಯವರದ್ದು)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.