
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗಿಂತ ಬುದ್ಧಿವಂತ ರಾಜಕಾರಣಿ ಎಂದು ಮುಕ್ತವಾಗಿ ಬಣ್ಣಿಸುವ ಮೂಲಕ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಜನತೆಯಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಭಾನುವಾರ ‘ಕನ್ನಡಪ್ರಭ’ ಜತೆ ಮಾತನಾಡಿದ ಅವರು, ಬಹಳಷ್ಟು ಬಜೆಟ್ಗಳನ್ನು ಮಂಡಿಸಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರಿಗಿದೆ. ಯಾರು ಏನೇ ಹೇಳಲಿ ರಾಜ್ಯ ಸರ್ಕಾರ ತಂದ ಅಕ್ಕಿ ಭಾಗ್ಯ ಯೋಜನೆ ನಿಜಕ್ಕೂ ಅದ್ಭುತ.
ರಾಜ್ಯ ಸರ್ಕಾರ ಒಳ್ಳೊಳ್ಳೆ ಯೋಜನೆಗಳನ್ನು ಹಮ್ಮಿಕೊಳ್ಳುತ್ತ ಹಲವು ಭಾಗ್ಯಗಳನ್ನು ಪ್ರಕಟಿಸುತ್ತಿದೆ. ಆದರೆ, ಅವುಗಳನ್ನು ಸರಿಯಾದ ರೀತಿಯಲ್ಲಿ ಜಾರಿಗೆಗೊಳಿಸುತ್ತಿಲ್ಲ ಎಂದು ಅಭಿಪ್ರಾಯಪಟ್ಟರು. ಸಿದ್ದರಾಮಯ್ಯ ಬುದ್ಧಿವಂತರಾಗಿದ್ದರಿಂದಲೇ ಯಡಿಯೂರಪ್ಪನವರಂತೆ ಜೈಲಿಗೆ ಹೋಗಲಿಲ್ಲ. ಆದರೆ, ಗಣಿ ಹಗರಣಗಳಲ್ಲಿ ಸಿಲುಕಿದ್ದ ಶಾಸಕರಾದ ಆನಂದ ಸಿಂಗ್, ಬಿ. ನಾಗೇಂದ್ರ ಹಾಗೂ ಅಶೋಕ ಖೇಣಿ ಅಂಥವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿರುವುದು ಸಿದ್ದರಾಮಯ್ಯ ಸಾಧನೆಗೆ ಕಪ್ಪು ಚುಕ್ಕೆ ಯಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.