
ಬೆಂಗಳೂರು [ಸೆ.12]: ವಿರೋಧಪಕ್ಷದ ನಾಯಕ ಸ್ಥಾನ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ನೇಮಕದ ವಿಚಾರವಾಗಿ ಚರ್ಚಿಸಲು ಬುಧವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ.
ಗುರುವಾರ ಬೆಳಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಶಾಸಕಾಂಗ ನಾಯಕರ ಸಭೆಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಈ ವೇಳೆ ಮಹಾತ್ಮ ಗಾಂಧಿಯವರ 150ನೇ ಜನ್ಮ ದಿನಾಚರಣೆ, ಪಕ್ಷದ ಸದಸ್ಯತ್ವ ನೋಂದಣಿ ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಬಳಿಕ ಹೈಕಮಾಂಡ್ ನಾಯಕರ ಜತೆ ವಿರೋಧಪಕ್ಷದ ನಾಯಕರ ಆಯ್ಕೆ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.