ಗುಲಾಮಗಿರಿ ಮಾಡೋರು ಒಂದೇ ಪಕ್ಷದಲ್ಲಿರ್ತಾರೆ: ಈಶ್ವರಪ್ಪಗೆ ಸಿದ್ದು ಟಾಂಗ್!

Published : Aug 31, 2019, 10:56 AM IST
ಗುಲಾಮಗಿರಿ ಮಾಡೋರು ಒಂದೇ ಪಕ್ಷದಲ್ಲಿರ್ತಾರೆ: ಈಶ್ವರಪ್ಪಗೆ ಸಿದ್ದು ಟಾಂಗ್!

ಸಾರಾಂಶ

ಸ್ವಾಭಿಮಾನ ಇರುವವರು ಒಂದೇ ಪಕ್ಷಕ್ಕೆ ಅಂಟಿಕೊಂಡಿರುವುದಿಲ್ಲ| ಗುಲಾಮಗಿರಿ ಮಾಡೋರು ಒಂದೇ ಪಕ್ಷದಲ್ಲಿರ್ತಾರೆ: ಸಿದ್ದು| 

ಮಡಿಕೇರಿ[ಆ.31]: ಏನ್‌ ಎಲ್ಲರಿಗೂ ಮೂರು, ಮೂರು ತಾಯಿಯರು ಇರ್ತಾರೆನ್ರಿ...? ಎಲ್ಲರೂ ಒಂದೇ ತಾಯಿಗೆ ಹುಟ್ಟೋದು. ಗುಲಾಮಗಿರಿ ರಾಜಕೀಯ ಮಾಡೋವರೆಗೂ ಒಂದೇ ಪಕ್ಷದಲ್ಲಿ ಇರ್ತಾರೆ. ಸ್ವಾಭಿಮಾನಿ ರಾಜಕೀಯ ಮಾಡುವವರು ಆ ರೀತಿ ಇರಲು ಸಾಧ್ಯವಿಲ್ಲ ಎನ್ನುವ ಮೂಲಕ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ವಿರಾಜಪೇಟೆ ತಾಲೂಕಿನ ಕರಡಿಗೋಡಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ವಾಭಿಮಾನ ಇರುವವರು ಒಂದೇ ಪಕ್ಷಕ್ಕೆ ಅಂಟಿಕೊಂಡಿರುವುದಿಲ್ಲ ಎಂದು ಗುಡುಗಿದರು. ಇದಕ್ಕೂ ಮುನ್ನ ಈಶ್ವರಪ್ಪನ ಹೇಳಿಕೆಗೆ ನಾನು ಉತ್ತರ ನೀಡಲ್ಲ, ಆತ ಸುಸಂಸ್ಕೃತನಲ್ಲ, ಬಾಯಿಗೆ ಬಂದಾಗೆ ಮಾತನಾಡುತ್ತಾನೆ. ಮಾತಿನ ಮಹತ್ವದ ಬಗ್ಗೆ ಅರಿವಿಲ್ಲದವರ ಬಗ್ಗೆ ತಲೆಕೆಡಿಸಕೊಳ್ಳವುದು ಬೇಡ ಎಂದರು.

Video: ಸಿದ್ದರಾಮಯ್ಯ ವಿರುದ್ಧ ಮತ್ತೆ ನಾಲಿಗೆ ಹರಿಬಿಟ್ಟ ಈಶ್ವರಪ್ಪ

ನನ್ನನ್ನು ಸೋಲಿಸಿದವರು ಅವರಲ್ಲ:

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ನನ್ನನ್ನು ತಿರಸ್ಕರಿಸುವ ಮೂಲಕ ಸೋಲಿಸಿದ್ದಾರೆಯೇ ವಿನಃ ಅನರ್ಹ ಶಾಸಕ ಎಚ್‌. ವಿಶ್ವನಾಥ್‌, ಸಂಸದ ವಿ. ಶ್ರೀನಿವಾಸಪ್ರಸಾದ್‌, ಶಾಸಕ ಜಿ.ಟಿ. ದೇವೇಗೌಡರಿಂದ ನಾನು ಸೋತಿಲ್ಲ, ನನ್ನ ಮತದಾರರ ತೀರ್ಪಿಗೆ ತಲೆ ಬಾಗುತ್ತೇನೆ. ಚುನಾವಣೆಯಲ್ಲಿ ನಾನು ಸೋತಿದ್ದರಿಂದ ಕ್ಷೇತ್ರದ ಜನತೆಗೆ ತಪ್ಪಿನ ಅರಿವು ಆಗಿದೆ, ನನಗೂ ನೋವಾಗಿದೆ. ಏನು ಮಾಡಲು ಆಗಲ್ಲ ಬಿಡಿ ಎಂದರು.

ವ್ಯಾಯಾಮ ಮಾಡಬೇಡಮ್ಮ:

ನೆರ ಪರಿಶೀಲನೆ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸುಮಯ್ಯಾ ಅವರು ತೋರದಲ್ಲಿ ಕೆಸರಿನಲ್ಲಿ ಕಾಲು ಜಾರಿದಾಗ ‘ಜೋಪಾನ ಅಮ್ಮಾ ಇಲ್ಲಿ ವ್ಯಾಯಾಮ ಮಾಡಬೇಡ ಮನೆಗೆ ಹೋಗಿ ಮಾಡು’ ಎಂದು ನಗೆ ಚಟಾಕಿ ಹಾರಿಸಿದರು. ಸಿದ್ದರಾಮಯ್ಯ ಜತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಜನ ಮುಗಿಬಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ