ಗೃಹ ಸಚಿವರ ಬದಲಾವಣೆ : ಪವರ್ಫುಲ್ ಆದ ಸಿದ್ದರಾಮಯ್ಯ

Published : Dec 31, 2018, 01:59 PM IST
ಗೃಹ ಸಚಿವರ ಬದಲಾವಣೆ :  ಪವರ್ಫುಲ್ ಆದ ಸಿದ್ದರಾಮಯ್ಯ

ಸಾರಾಂಶ

ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹಲವು ರೀತಿಯ ಬದಲಾವಣೆಗಳಾಗಿವೆ. ುಪ ಮುಖ್ಯಮಂತ್ರಿ ಬಳಿ ಇದ್ದ ಗೃಹ ಖಾತೆ ಎಂ.ಬಿ.ಪಾಟೀಲ್ ಅವರಿಗೆ ವರ್ಗಾವಣೆಯಾಗುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪವರ್ಫುಲ್ ಆಗಿದ್ದಾರೆ. 

ಬೆಂಗಳೂರು : ಡಿಸೆಂಬರ್ 22 ರಂದು ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ನೂತನವಾಗಿ 8 ಮುಖಂಡರು ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪುಟಕ್ಕೆ ಸೇರ್ಪಡೆಯಾದರು. 

ಈ ವೇಳೆ ಉಪಮುಖ್ಯಮಂತ್ರಿ ಪರಮೇಶ್ವರ್ ಬಳಿ ಇದ್ದ ಗೃಹ ಖಾತೆಯನ್ನು ಎಂ.ಬಿ ಪಾಟೀಲ್ ಅವರಿಗೆ ವಹಿಸಲಾಯ್ತು. ಈ ಬೆಳವಣಿಗೆಯ ಬಳಿಕ ಇದೀಗ ಮಾಜಿ ಸಿಎಂ‌ ಸಿದ್ದರಾಮಯ್ಯ ಪವರ್ ಫುಲ್ ಆಗಿದ್ದಾರೆ.  

ಸಿಎಂ ಸಿದ್ದರಾಮಯ್ಯಗೆ ಪ್ರಭಾವಿ ವ್ಯಕ್ತಿಗಳಿಗೆ ನೀಡುವ  ಜೆಡ್ ಭದ್ರತೆ ನೀಡಲು ನೂತನ ಗೃಹ ಸಚಿವರು ಆದೇಶ ನೀಡಿದ್ದಾರೆ.  

ಗೃಹ ಸಚಿವರ ಬದಲಾವಣೆ ನಂತರ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನಾಲ್ಕು ಎಸ್ಕಾರ್ಟ್ ವಾಹನದ ಜೊತೆಗೆ ಜಾಮರ್ ವಾಹನದ ಭದ್ರತಾ ಬೆಂಗಾವಲು ಪಡೆಯನ್ನು ನೀಡಲಾಗಿದೆ.  

ಅಲ್ಲದೇ ಮೈಸೂರಿನ ನಿವಾಸಕ್ಕೆ ಶ್ವಾನ ದಳದ ತಪಾಸಣೆ ಸೇರಿದಂತೆ ಹೆಚ್ಚಿನ ಸೆಕ್ಯೂರಿಟಿಗೆ ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಮೌಖಿಕ ಆದೇಶ ನೀಡಿದ್ದಾರೆ. ಈ ನಿಟ್ಟಿನಲ್ಲಿ ಪ್ರಭಾವಿ ವ್ಯಕ್ತಿಗಳ ಭದ್ರತಾ ಸ್ಥಾನಮಾನ ಸಿದ್ದರಾಮಯ್ಯಗೆ ದೊರಕಿದಂತಾಗಿದೆ. 

ಖಾತೆ ಬದಲಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚು ಪವರ್ಫುಲ್ ಆಗಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ