
ಬೆಂಗಳೂರು : ಡಿಸೆಂಬರ್ 22 ರಂದು ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ನೂತನವಾಗಿ 8 ಮುಖಂಡರು ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪುಟಕ್ಕೆ ಸೇರ್ಪಡೆಯಾದರು.
ಈ ವೇಳೆ ಉಪಮುಖ್ಯಮಂತ್ರಿ ಪರಮೇಶ್ವರ್ ಬಳಿ ಇದ್ದ ಗೃಹ ಖಾತೆಯನ್ನು ಎಂ.ಬಿ ಪಾಟೀಲ್ ಅವರಿಗೆ ವಹಿಸಲಾಯ್ತು. ಈ ಬೆಳವಣಿಗೆಯ ಬಳಿಕ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಪವರ್ ಫುಲ್ ಆಗಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಪ್ರಭಾವಿ ವ್ಯಕ್ತಿಗಳಿಗೆ ನೀಡುವ ಜೆಡ್ ಭದ್ರತೆ ನೀಡಲು ನೂತನ ಗೃಹ ಸಚಿವರು ಆದೇಶ ನೀಡಿದ್ದಾರೆ.
ಗೃಹ ಸಚಿವರ ಬದಲಾವಣೆ ನಂತರ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನಾಲ್ಕು ಎಸ್ಕಾರ್ಟ್ ವಾಹನದ ಜೊತೆಗೆ ಜಾಮರ್ ವಾಹನದ ಭದ್ರತಾ ಬೆಂಗಾವಲು ಪಡೆಯನ್ನು ನೀಡಲಾಗಿದೆ.
ಅಲ್ಲದೇ ಮೈಸೂರಿನ ನಿವಾಸಕ್ಕೆ ಶ್ವಾನ ದಳದ ತಪಾಸಣೆ ಸೇರಿದಂತೆ ಹೆಚ್ಚಿನ ಸೆಕ್ಯೂರಿಟಿಗೆ ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಮೌಖಿಕ ಆದೇಶ ನೀಡಿದ್ದಾರೆ. ಈ ನಿಟ್ಟಿನಲ್ಲಿ ಪ್ರಭಾವಿ ವ್ಯಕ್ತಿಗಳ ಭದ್ರತಾ ಸ್ಥಾನಮಾನ ಸಿದ್ದರಾಮಯ್ಯಗೆ ದೊರಕಿದಂತಾಗಿದೆ.
ಖಾತೆ ಬದಲಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚು ಪವರ್ಫುಲ್ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.