
ಬೆಂಗಳೂರು(ಡಿ.7): 2008ರಿಂದ ಆಳ್ವಿಕೆ ನಡೆಸಿದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಡು ಭ್ರಷ್ಟ ಎಂದು ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲೆಲ್ಲಾ ಹೇಳುತ್ತಿದ್ದಾರೆ. ಆದರೆ ಜನರಲ್ಲಿ ಅದಕ್ಕಿಂತ ಭಿನ್ನವಾದ ಭಾವನೆ ಇದೆ ಎಂಬ ಅಂಶ ಸಮೀಕ್ಷೆಯಿಂದ ಬೆಳಕಿಗೆ ಬಂದಿದೆ. ಈ ಹಿಂದಿನ ಯಡಿಯೂರಪ್ಪ ಸರ್ಕಾರ ಹಾಗೂ ಈಗಿನ ಸಿದ್ದರಾಮಯ್ಯ ಸರ್ಕಾರ ಎರಡೂ ಭ್ರಷ್ಟ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಹೆಚ್ಚಿನ ಸಂಖ್ಯೆಯ ಜನರು ಹೇಳಿದ್ದಾರೆ. ವಿಶೇಷ ಎಂದರೆ, ಯಡಿಯೂರಪ್ಪ ಸರ್ಕಾರಕ್ಕಿಂತ ಸಿದ್ದರಾಮಯ್ಯ ಸರ್ಕಾರವೇ ಅತಿ ಹೆಚ್ಚು ಭ್ರಷ್ಟ ಎಂದು ಹೇಳಿರುವವರೇ ಅಧಿಕ ಪ್ರಮಾಣದಲ್ಲಿರುವುದು ಕಾಂಗ್ರೆಸ್ಸಿಗರು ಚಿಂತೆ ಮಾಡಬೇಕಾದ ವಿಷಯ.
ಎರಡೂ ಸರ್ಕಾರಗಳು ಭ್ರಷ್ಟ ಎಂಬ ಅಭಿಪ್ರಾಯ ಗ್ರಾಮೀಣ ಭಾಗದಲ್ಲಿದ್ದರೆ, ಸಿದ್ದರಾಮಯ್ಯ ಸರ್ಕಾರವೇ ಅತಿ ಹೆಚ್ಚು ಭ್ರಷ್ಟ ಎಂಬ ಭಾವನೆ ನಗರಗಳಲ್ಲಿ ಇದೆ. ಲಿಂಗಾಯತರ ಪೈಕಿ `ಎರಡೂ ಸರ್ಕಾರ ಭ್ರಷ್ಟ' ಹಾಗೂ `ಸಿದ್ದು ಸರ್ಕಾರ ಅತಿ ಹೆಚ್ಚು ಭ್ರಷ್ಟ' ಎಂಬ ಅಭಿಪ್ರಾಯ ಹೆಚ್ಚೂಕಡಿಮೆ ಒಂದೇ ಪ್ರಮಾಣದಲ್ಲಿರುವುದರಿಂದ ಬಿಜೆಪಿ ಕೊಂಚ ಖುಷಿಪಡಬಹುದು. ಒಕ್ಕಲಿಗರಲ್ಲಿ ಸಿದ್ದರಾಮಯ್ಯ ಸರ್ಕಾರವೇ ಭ್ರಷ್ಟ ಎಂಬ ಅಭಿಪ್ರಾಯವಿದೆ. ಕರಾವಳಿ, ಕೇಂದ್ರ ಕರ್ನಾಟಕ,ಬೆಂಗಳೂರು, ಮೈಸೂರು ಭಾಗದಲ್ಲಿ ಈ ಅಭಿಪ್ರಾಯವೇ ಬಲವಾಗಿ ಕಂಡುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.