
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜೆಡಿಎಸ್ ತೊರೆದ ನಂತರ ಕಾಂಗ್ರೆಸ್ ಸೇರುವ ಬದಲು ಬಿಜೆಪಿಗೆ ಸೇರುವ ಪ್ರಯತ್ನ ನಡೆಸಿದ್ದರು ಎಂಬ ಅಂಶವನ್ನು ಕುಮಾರಸ್ವಾಮಿ ಬಹಿರಂಗಪಡಿಸಿದರು.
ಬಿಜೆಪಿ ವರಿಷ್ಠರ ಜತೆ ಮಾತುಕತೆಯೂ ನಡೆದಿತ್ತು. ಕೊನೆ ಗಳಿಗೆಯಲ್ಲಿ ಕಾಂಗ್ರೆಸ್’ಗೆ ಹೋದರು ಎಂದರು.
ಸಿದ್ದರಾಮಯ್ಯ ಇದೀಗ ದುರಹಂಕಾರದ ಮಾತುಗಳನ್ನಾಡುತ್ತಿದ್ದು, ದುಡ್ಡಿನ ಮದ ಏರಿದೆ. ಅವರಿಗೆ ಪೊಲೀಸ್ ಜೀಪ್ಗಳಲ್ಲಿ ಹಣ ಸಾಗಿಸುವುದು ಕರಗತವಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ.ದೇವೇಗೌಡ ಮತ್ತು ಹುಣಸೂರಿನ ಕ್ಷೇತ್ರದಿಂದ ಎಚ್.ವಿಶ್ವನಾಥ್ ಅವರು ಸ್ಪರ್ಧಿಸುತ್ತಾರೆ. ಮುಖ್ಯಮಂತ್ರಿಗಳು ಬರಲಿ ನೋಡೋಣ ಎಂದು ಸವಾಲು ಹಾಕಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸದಿದ್ದರೆ ಸಿದ್ದರಾಮಯ್ಯ ಅವರು ಕಾಂಗ್ರೆಸ್ಗೆ ಹೋಗುತ್ತಿರಲಿಲ್ಲ. ಅಲ್ಲಿ ಪ್ರತಿಪಕ್ಷದ ನಾಯಕರೂ ಆಗುತ್ತಿರಲಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.