
ಬೆಂಗಳೂರು(ಫೆ.06): ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ರಾಜ್ಯ ಸರ್ಕಾರವನ್ನು ಭ್ರಷ್ಟಾಚಾರ, ಕಮಿಷನ್ ಏಜೆಂಟ್ ಸರ್ಕಾರ ಎಂದು ಬಹಿರಂಗವಾಗಿ ಜರಿದ ನಂತರ ಎರಡೂ ಪಕ್ಷಗಳ ನಾಯಕರ ನಡುವೆ ವಾಗ್ವಾದಗಳು ಹೆಚ್ಚು ರಂಗೇರಿವೆ.
ಇಂದು ಮತ್ತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ವಿಟರ್ ಮೂಲಕ ಬಹಿರಂಗ ಚರ್ಚೆಗೆ ಕರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವೈಯಕ್ತಿಕ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ಭ್ರಷ್ಟಾಚಾರದ ಬಗ್ಗೆ ಇಬ್ಬರು ಚರ್ಚೆ ಬನ್ನಿ ಇಬ್ಬರು ಪರಸ್ಪರ ಮಾತನಾಡೋಣ' ಎಂದಿದ್ದು, ಲೋಕಪಾಲ್ ನೇಮಕಾತಿ, ಸಿಬಿಐ ನ್ಯಾಯಾಧೀಶ ಲೋಯಾ ಸಾವಿನ ತನಿಖೆ, ಅಮಿತ್ ಶಾ ಪುತ್ರ ಜಯ್ ಶಾ ಆಸ್ತೆ ದುಪ್ಪಟ್ಟು ಏರಿಕೆ ಹಾಗೂ ಕಳಂಕಯುಕ್ತ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ, ಚರ್ಚೆಗೆ ಆಹ್ವಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.