ಸಿದ್ದರಾಮಯ್ಯ ತಡರಾತ್ರಿ ಮೀಟಿಂಗ್ : ತೆಗೆದುಕೊಂಡ ನಿರ್ಧಾರವೇನು?

Published : Jul 19, 2019, 10:58 AM IST
ಸಿದ್ದರಾಮಯ್ಯ ತಡರಾತ್ರಿ ಮೀಟಿಂಗ್ : ತೆಗೆದುಕೊಂಡ ನಿರ್ಧಾರವೇನು?

ಸಾರಾಂಶ

ಕರ್ನಾಟಕ ರಾಜಕೀಯದಲ್ಲಿ ಅವಿಶ್ವಾಸ ಮತಕ್ಕೆ ಡೆಡ್ ಲೈನ್ ನೀಡಲಾಗಿದೆ. ಇತ್ತ ಸಿದ್ದರಾಮಯ್ಯ ತಡರಾತ್ರಿವರೆಗೂ ಮೀಟಿಂಗ್ ಮಾಡಿ ನಿರ್ಧಾರ ತೆಗೆದುಕೊಂಡಿದ್ದಾರೆ.

ಬೆಂಗಳೂರು [ಜು.19] :  ಕರ್ನಾಟಕ ರಾಜಕೀಯದಲ್ಲಿ ಪ್ರಹಸನ ನಡೆಯುತ್ತಿದ್ದು, ಅವಿಶ್ವಾಸಕ್ಕೆ ಡೆಡ್ ಲೈನ್ ನೀಡಲಾಗಿದೆ. ಇತ್ತ ಮೈತ್ರಿ ನಾಯಕರು ಮಾಸ್ಟರ್ ಪ್ಲಾನ್ ನಲ್ಲಿ ತೊಡಗಿದ್ದು, ತಡರಾತ್ರಿವರೆಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ. 

ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ನಾಗೇಂದ್ರ ಅವರನ್ನು ಕರೆತರಲು ವ್ಯವಸ್ಥೆ ಮಾಡಲು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇನ್ನು ಕಿಡ್ನಾಪ್ ಆಗಿದ್ದಾರೆ ಎನ್ನಲಾದ ಶ್ರೀಮಂತ ಪಾಟೀಲ್ ಅವರನ್ನು ಮುಂಬೈ ಆಸ್ಪತ್ರೆಯಿಂದ ಕರೆತರಲು ಸಾಧ್ಯವೇ ಎಂದು ಮಾಹಿತಿ ಪಡೆದಿದ್ದಾರೆ. 

ಹಲವು ಅತೃಪ್ತ ಶಾಸಕರು ಮುಂಬೈ ನಲ್ಲಿ ಬೀಡು ಬಿಟ್ಟಿದ್ದು, ಇದರೊಂದಿಗೆ ಇನ್ನಷ್ಟು ಕಾಂಗ್ರೆಸಿಗರು ಕಲಾಪಕ್ಕೆ ಗೈರಾಗಿದ್ದಾರೆ. ಇದು ಮೈತ್ರಿ ಪಾಳಯದಲ್ಲಿ ಆತಂಕಕ್ಕೆ ಎಡೆ ಮಾಡಿದ್ದು, ನಿರಂತರ ಪ್ರಯತ್ನಗಳು ನಡೆಸುತ್ತಿದ್ದಾರೆ. ಆದರೆ ಈ ಯತ್ನ ಸಫಲವಾಗುವುದು ಮಾತ್ರ ಅನುಮಾನವಾಗಿದೆ.

 ದರೆ ಇತ್ತ ವಿಶ್ವಾಸಮತಕ್ಕೆ ಸೂಚನೆ ನೀಡಿ ಇಂದು ಮಧ್ಯಾಹ್ನಕ್ಕೆ ಡೆಡ್ ಲೈನ್ ನೀಡಲಾಗಿದೆ. ಅದರಂತೆ ವಿಶ್ವಾಸಮತ ಯಾಚಿಸುವುದೇ ಸೂಕ್ತ ಎಂದು ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?