ಹತಾಶ ಬಿಜೆಪಿಯಿಂದ ದ್ವೇಷ ರಾಜಕಾರಣ: ಐಟಿ ದಾಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

Published : Aug 02, 2017, 02:40 PM ISTUpdated : Apr 11, 2018, 12:44 PM IST
ಹತಾಶ ಬಿಜೆಪಿಯಿಂದ ದ್ವೇಷ ರಾಜಕಾರಣ: ಐಟಿ ದಾಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಸಾರಾಂಶ

ಇಂಧನ ಸಚಿವ ಡಿ,ಕೆ.ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯನ್ನು ಅಪ್ರಜಾಸತ್ತಾತ್ಮಕ ಕ್ರಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಾರು ತಮ್ಮ ವಿರುದ್ಧ ಧ್ವನಿಯೆತ್ತುತ್ತಾರೋ ಅವರ ಮೇಲೆ ಇಂತಹ ದಾಳಿಗಳನ್ನು ನಡೆಸುವುದು ಬಿಜೆಪಿಯ ಚಾಳಿಯಾಗಿದೆ ಎಂದು ಹೇಳಿರುವ ಸಿದ್ದರಾಮಯ್ಯ ಇದು  ಪ್ರಜಾತಂತ್ರದ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು: ಇಂಧನ ಸಚಿವ ಡಿ,ಕೆ.ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿರುವ ದಾಳಿಯನ್ನು ಅಪ್ರಜಾಸತ್ತಾತ್ಮಕ ಕ್ರಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಾರು ತಮ್ಮ ವಿರುದ್ಧ ಧ್ವನಿಯೆತ್ತುತ್ತಾರೋ ಅವರ ಮೇಲೆ ಇಂತಹ ದಾಳಿಗಳನ್ನು ನಡೆಸುವುದು ಬಿಜೆಪಿಯ ಚಾಳಿಯಾಗಿದೆ ಎಂದು ಹೇಳಿರುವ ಸಿದ್ದರಾಮಯ್ಯ ಇದು  ಪ್ರಜಾತಂತ್ರದ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

 

ಡಿ.ಕೆ. ಶಿವಕುಮಾರ್ ನಿವಾಸದ ಮೇಲಿನ ದಾಳಿ ವಿಚಾರವಾಗಿ ಇಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಕೇಂದ್ರೀಯ ಸಂಸ್ಥೆಗಳನ್ನು ಸರ್ಕಾರವು ದುರ್ಬಳಕೆ ಮಾಡುತ್ತಿದ್ದು ರಾಜಕೀಯ ಸೇಡು ತೀರಿಸುವ ಕೆಲಸ ಮಾಡುತ್ತಿದೆಯೆಂದು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆಲ್ಮೆಟ್ ಇಲ್ಲದ ಬೈಕ್ ಸವಾರನ ಹಿಡಿದ ಪೊಲೀಸ್, ಒಂದೇ ಮಾತಿಗೆ ದಂಡ ವಿಧಿಸದೆ ಬಿಟ್ಟುಕಳುಹಿಸಿದ್ರು
ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ