‘ಸಿದ್ದು ಮತ್ತೆ ಸಿಎಂ ಆಗ್ಬೇಕು’ ಕೂಗಿಗೆ ಸ್ವತಃ ತೆರೆ ಎಳೆದ ಮಾಜಿ ಸಿಎಂ

By Web DeskFirst Published May 8, 2019, 10:50 PM IST
Highlights

ರಾಜ್ಯದಲ್ಲಿ ದೋಸ್ತಿ ಸರ್ಕಾರ ಇದ್ದರೂ ಆಗಾಗ  ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಹೇಳಿದ ಅನೇಕ ಉದಾಹರಣೆಗಳಿವೆ. ಆದರೆ ಈ ಎಲ್ಲ ವಿಚಾರಗಳಿಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ  ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಬೆಂಗಳೂರು]ಮೇ 08]  ಸಿದ್ದರಾಮಯ್ಯ ಮತ್ತೆ ಸಿಎಂ  ಆಗಬೇಕು ಇದು ಕಾಂಗ್ರೆಸ್ ವಲಯದ ಹಲವು ಮುಖಂಡರಿಂದ ಕೇಳಿ ಬರುತ್ತಿರುವ ಕೂಗು. ಆದರೆ ಇದಕ್ಕೆಲ್ಲ ಮಾಜಿ ಸಿಎಂ ಸಿದ್ದರಾಮಯ್ಯ ಖುದ್ದಾಗಿ ತೆರೆ ಎಳೆಯುವ ಮನಸ್ಸು ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ’ನಮ್ಮ ಪಕ್ಷದ ಶಾಸಕರು ಅಭಿಮಾನದಿಂದ ನಾನು ಮತ್ತೆ ಸಿಎಂ ಆಗಬೇಕು ಎಂದು ಹೇಳುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಈಗ ಸಿಎಂ ಹುದ್ದೆ ಖಾಲಿಯಿಲ್ಲ. ಈಗ ಸಿಎಂ ಯಾರಾಗಬೇಕು ಎಂಬ ಪ್ರಶ್ನೆ ಅಷ್ಟು ಸಮಂಜಸವಲ್ಲ’ ಎಂದು ಬರೆದುಕೊಂಡಿದ್ದಾರೆ.

ನಮ್ಮ ಪಕ್ಷದ ಶಾಸಕರು ಅಭಿಮಾನದಿಂದ ನಾನು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಹೇಳುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಈಗ ಮುಖ್ಯಮಂತ್ರಿ ಯಾರಾಗಬೇಕು ಎಂಬ ಪ್ರಶ್ನೆ ಅಷ್ಟು ಸಮಂಜಸವಲ್ಲ.

— Siddaramaiah (@siddaramaiah)
click me!